ಸಿಸಿಬಿ 
ರಾಜ್ಯ

ಬೆಂಗಳೂರು: ಬಂಧಿತ ಶಂಕಿತ ಉಗ್ರನ ಮಾಹಿತಿ ಮೇರೆಗೆ ತಮಿಳು ನಾಡಿನಲ್ಲಿ ಮತ್ತೋರ್ವ ಶಂಕಿತ ವಶಕ್ಕೆ

ಸಾಮಾಜಿಕ ಜಾಲತಾಣಗಳ ಮೂಲಕ ಜಿಹಾದ್ ಯುದ್ದಕ್ಕೆ ಪ್ರಚೋದಿಸುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾದ ಶಂಕಿತ ಉಗ್ರ ನೀಡಿದ ಮಾಹಿತಿ‌ ಮೇರೆಗೆ ಮತ್ತೊಬ್ಬ ಶಂಕಿತನನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಜಿಹಾದ್ ಯುದ್ದಕ್ಕೆ ಪ್ರಚೋದಿಸುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾದ ಶಂಕಿತ ಉಗ್ರ ನೀಡಿದ ಮಾಹಿತಿ‌ ಮೇರೆಗೆ ಮತ್ತೊಬ್ಬ ಶಂಕಿತನನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಸ್ಸಾಂನ ಅಖ್ತರ್, ತಿಲಕ್ ನಗರದ ಬಹುಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಮನೆಯಲ್ಲಿ ನೆಲೆಸಿದ್ದ. ಆತನ ಜೊತೆ ಆಹಾರ ಡೆಲಿವರಿ ಬಾಯ್‌ಗಳು ವಾಸವಿದ್ದರು. ಶಂಕಿತನ ಬಗ್ಗೆ ಕೇಂದ್ರ ಗುಪ್ತದಳದಿಂದ‌ ಮಾಹಿತಿ ಬಂದಿತ್ತು. ಕಾರ್ಯಾಚರಣೆ ನಡೆಸಿದ ಸಿಸಿಬಿ‌ ಪೊಲೀಸರು, ರಾತ್ರಿ‌ ಮನೆ ಮೇಲೆ ದಾಳಿ‌ ಮಾಡಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ.

'ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿದ್ದ ಅಖ್ತರ್, ಉತ್ತರ ಭಾರತದಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದ. ಈತನನ್ನು‌ ವಶಕ್ಕೆ‌ ಪಡೆಯಲಾಗಿದ್ದು, ವಿಚಾರಣೆ ನಡೆಸಿದ ಬಳಿಕವೇ ಮತ್ತಷ್ಟು ಮಾಹಿತಿ ಸಿಗಲಿದೆ' ಎಂದು‌ ಸಿಸಿಬಿ‌ ಮೂಲಗಳು ಹೇಳಿವೆ.

ಬಂಧಿತ ಶಂಕಿತ ಉಗ್ರನ ಮಾಹಿತಿ; ತ.ನಾಡಿನಲ್ಲಿ ಮತ್ತೋರ್ವ ಶಂಕಿತ ವಶಕ್ಕೆ
ಸಾಮಾಜಿಕ ಜಾಲತಾಣಗಳ ಮೂಲಕ ಜಿಹಾದ್ ಯುದ್ದಕ್ಕೆ ಪ್ರಚೋದಿಸುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾದ ಶಂಕಿತ ಉಗ್ರ ನೀಡಿದ ಮಾಹಿತಿ‌ ಮೇರೆಗೆ ಮತ್ತೊಬ್ಬ ಶಂಕಿತನನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದು ನಗರಕ್ಕೆ‌ ಕರೆತರಲಾಗುತ್ತಿದೆ‌.

ಅಸ್ಸೋಂ ಮೂಲದ ಅಕ್ತರ್ ಹುಸೇನ್ 2020ರಲ್ಲಿ ತಿಲಕ್‌ ನಗರದಲ್ಲಿ ವಾಸವಾಗಿದ್ದ. ಇತ್ತೀಚೆಗಷ್ಟೇ ಡಿಲಿವರಿ ಬಾಯ್ ಕೆಲಸಕ್ಕೆ‌ ಸೇರಿಕೊಂಡಿದ್ದ. ಈ ಹಿಂದೆ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಸೇರಿ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿದ್ದ.‌ ಸುದೀರ್ಘ ಕಾಲ‌ ಒಂದೇ ಕಡೆ ಕೆಲಸ ಮಾಡದೇ ಕಂಪನಿಗಳನ್ನು ಬದಲಾಯಿಸುತ್ತಿದ್ದ. ಈತನ ಜೊತೆ ಮತ್ತೋರ್ವ ಶಂಕಿತ ಉಗ್ರ ತಮಿಳುನಾಡಿನಲ್ಲಿ‌ದ್ದ ಜುಬಾ ಎಂಬಾತನ ಜೊತೆ ಸಂಪರ್ಕ ಹೊಂದಿದ್ದ.‌ ಇಬ್ಬರು ಅಸ್ಸೋಂ ಮೂಲದವರಾಗಿದ್ದಾರೆ. ಆಲ್‌ ಕೈದಾ ಹಾಗೂ ಐಸಿಸ್ ಉಗ್ರ ಸಂಘಟನೆಗಳ‌ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ವಿಚಾರಣೆ ವೇಳೆ ಅಕ್ತರ್ ನೀಡಿದ ಮಾಹಿತಿ ಮೇರೆಗೆ ಸಿಸಿಬಿ ಮತ್ತೊಂದು ವಿಶೇಷ ತಂಡ ಕಾರ್ಯಾಚರಣೆ ನಡೆಸಿ ತಮಿಳುನಾಡಿನ‌‌ ಸೇಲಂನಲ್ಲಿ ಶಂಕಿತನನ್ನ ವಶಕ್ಕೆ ಪಡೆದು ನಗರಕ್ಕೆ ಕರೆತರುತ್ತಿದೆ.

ಸೋಷಿಯಲ್ ಮೀಡಿಯಾಗಳಲ್ಲಿ ಕಾರ್ಯಾಚರಣೆ
ಸೋಷಿಯಲ್‌ ಮೀಡಿಯಾಗಳಾದ ಫೇಸ್​ಬುಕ್, ವಾಟ್ಸ್​ಆ್ಯಪ್​, ಟೆಲಿಗ್ರಾಮ್ ಸೇರಿದಂತೆ ಹಲವು ಪರ್ಯಾಯ ಮಾಧ್ಯಮಗಳ ಮುಖಾಂತರ ಗ್ರೂಪ್ ರಚಿಸಿದ್ದ. ಭಾರತದಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗುತ್ತಿದೆ. ನಮ್ಮ ಅಸ್ವಿತ್ತ ಕಾಪಾಡಿಕೊಳ್ಳಬೇಕಾದರೆ ಧರ್ಮ ಯುದ್ದ ಮಾಡಬೇಕಿದೆ ಎಂದು ಗ್ರೂಪ್ ಸದಸ್ಯರೊಂದಿಗೆ ಚಾಟ್ ಮಾಡುತ್ತಿದ್ದ. ಪರೋಕ್ಷವಾಗಿ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಲು ಪ್ರೇರೆಪಿಸುತ್ತಿದ್ದ. ಕೊಲ್ಕತ್ತಾ, ಚೆನ್ನೈ ಸೇರಿ ದೇಶದ ಹಲವು ಕಡೆಗಳಲ್ಲಿ ಯುವಕರು ಗ್ರೂಪ್ ನ ಸದಸ್ಯರಾಗಿದ್ದರು.ಬಂಧಿತನಾದ ಶಂಕಿತ ಉಗ್ರನಿಂದ ಜಪ್ತಿ ಮಾಡಿಕೊಂಡ ಮೊಬೈಲ್​ನ್ನು ಎಫ್ಎಸ್ಎಲ್‌ ಗೆ ಒಳಪಡಿಸಿ ಅಧಿಕಾರಿಗಳು ರಿಟ್ರೀವ್ ಮಾಡಿದ್ದಾರೆ. ಗ್ರೂಪ್‌ ಸದಸ್ಯರೊಂದಿಗೆ ಜಿಹಾದ್ ಹೋರಾಟ ಬಗ್ಗೆ ಚಾಟ್ ಮಾಡಿರುವುದು ಗೊತ್ತಾಗಿದೆ. ಹಲವು ಮಂದಿ ಮೂಲಭೂತವಾದಿಗಳೊಂದಿಗೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗುತ್ತಿದೆ.

ಹಲವು ತಿಂಗಳಿಂದ ಸೋಷಿಯಲ್‌ ಮೀಡಿಯಾದಲ್ಲಿ ಗ್ರೂಪ್ ರಚಿಸಿಕೊಂಡಿರುವ ಮಾಹಿತಿ ಮೇರೆಗೆ ಸಿಸಿಬಿಯ ಭಯೋತ್ಪಾದನ ನಿಗ್ರಹ ದಳ (ಎಟಿಸಿ) ಗೆ ಅಧಿಕಾರಿಗಳಿಗೆ ತೆಲಂಗಾಣ‌ ಪೊಲೀಸರು ಬೆಂಗಳೂರಿನಲ್ಲಿ‌‌ ಶಂಕಿತ ಉಗ್ರ ನೆಲೆಸಿರುವ ಬಗ್ಗೆ ಮಾಹಿತಿ ನೀಡಿದ್ದರು.ಇದೇ ಆಧಾರದಲ್ಲಿ ನಿನ್ನೆ ಸಿಸಿಬಿ ದಾಳಿ ನಡೆಸಿ ಶಂಕಿತ ಉಗ್ರನನ್ನ ಬಂಧಿಸಿತ್ತು. ಸದ್ಯ‌ 50ನೇ‌ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಕಾ‌ಲ‌ ಪೊಲೀಸ್ ಕಸ್ಟಡಿ ಪಡೆದುಕೊಂಡು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಎನ್ಐಎ, ಐಬಿ ಹಾಗೂ ಐಎಸ್​ಡಿ ಅಧಿಕಾರಿಗಳು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಕೆಲ‌ ದಿನಗಳ ಹಿಂದೆಯಷ್ಟೇ ಓಕಳಿಪುರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT