ಪಬ್ ಮೇಲೆ ಭಜರಂಗದಳ‌ ಕಾರ್ಯಕರ್ತರ ದಾಳಿ 
ರಾಜ್ಯ

ಮಂಗಳೂರು: ಪಬ್ ಮೇಲೆ ಭಜರಂಗದಳ‌ ದಾಳಿ, ವಿದ್ಯಾರ್ಥಿಗಳ ಮೋಜು ಮಸ್ತಿಗೆ ಅಡ್ಡಿ!

ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮಂಗಳೂರಿನಲ್ಲಿ ಇದೀಗ ಭಜರಂಗದಳ‌ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿ ವಿದ್ಯಾರ್ಥಿಗಳ ವಿದಾಯಕೂಟಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗಿದೆ.

ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮಂಗಳೂರಿನಲ್ಲಿ ಇದೀಗ ಭಜರಂಗದಳ‌ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿ ವಿದ್ಯಾರ್ಥಿಗಳ ವಿದಾಯಕೂಟಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗಿದೆ.

ಮಂಗಳೂರು ನಗರದ ಪಬ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಸೇರಿ ವಿದಾಯಕೂಟ ಆಚರಿಸುತ್ತಿದ್ದ ಸಂದರ್ಭದಲ್ಲಿ ಬಜರಂಗ ದಳದ ಕಾರ್ಯಕರ್ತರು ಸೋಮವಾರ ರಾತ್ರಿ ಅಲ್ಲಿಗೆ ತೆರಳಿ ವಿದ್ಯಾರ್ಥಿಗಳ ಮೋಜುಮಸ್ತಿಗೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. 

ಪಬ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡೆಸ್ತಾ ಇದ್ದ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ್ದು, ಪಾರ್ಟಿಯಲ್ಲಿ ತೊಡಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್‌ನಿಂದ ಹೊರಗೆ ಕಳುಹಿಸಿದ ಘಟನೆ ಮಂಗಳೂರಿನ ಬಲ್ಮಠ ಬಳಿ ನಡೆದಿದೆ.

ಮಂಗಳೂರಿನ ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್‌ನಲ್ಲಿ ಪಾರ್ಟಿಗೆ ಭಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿತ್ತು. ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿ ಆರೋಪಿಸಿ ಭಜರಂಗದಳ ತಡೆ ಒಡ್ಡಿದೆ. ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ. ‌ 

ಪಬ್ ಒಳ ಹೊಕ್ಕು ಪಾರ್ಟಿ ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರು, ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ಬಳಿಕ ಮಧ್ಯ ಪ್ರವೇಶಿಸಿ ಬಜರಂಗದಳದ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ್ದು, ಸದ್ಯ ಪಾರ್ಟಿ ಅರ್ಧದಲ್ಲೇ ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಕಾಲ್ಕಿತ್ತಿದ್ದಾರೆ. ತುಂಡುಡುಗೆ ತೊಟ್ಟು ಕುಡಿದು ವಿದ್ಯಾರ್ಥಿಗಳಿಂದ ಮೋಜು ಮಸ್ತಿ ಆರೋಪದ ಮೇಲೆ ಸುಮಾರು 30-40 ಬಜರಂಗದಳದ ಕಾರ್ಯಕರ್ತರು ಅಡ್ಡಿ ಪಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಲಿಪ್ ಲಾಕ್ ವಿಡಿಯೋ ಮೂಲಕ ಸುದ್ದಿಯಾಗಿದ್ದ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದ್ದು, ಪದವಿ ವಿದ್ಯಾರ್ಥಿಗಳಿಂದ ಪಬ್‌ನಲ್ಲಿ ಮೋಜು ಮಸ್ತಿ ಹಿನ್ನೆಲೆ ತಡೆ ಒಡ್ಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT