ಭುವನೇಶ್ವರಿ 
ರಾಜ್ಯ

ಬೆಂಗಳೂರಿನ ಕಲಾಗ್ರಾಮದಲ್ಲಿ ನಾಡ ದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ನಿರ್ಮಾಣ

ನಾಡ ದೇವಿ ಭುವನೇಶ್ವರಿಯ ನಿತ್ಯ ಅರ್ಚನೆಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈಗ ಇನ್ನೊಂದು ವಿನೂತನ ಯೋಜನೆ ರೂಪಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಾಂಬೆಯ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ‌ ತೀರ್ಮಾನಿಸಿದೆ.

ಬೆಂಗಳೂರು: ನಾಡ ದೇವಿ ಭುವನೇಶ್ವರಿಯ ನಿತ್ಯ ಅರ್ಚನೆಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈಗ ಇನ್ನೊಂದು ವಿನೂತನ ಯೋಜನೆ ರೂಪಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಾಂಬೆಯ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ‌ ತೀರ್ಮಾನಿಸಿದೆ.

ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಕಲಾಗ್ರಾಮದಲ್ಲಿ ಸುಮಾರು ಅರ್ಧ ಎಕರೆಯಷ್ಟು ಪ್ರದೇಶದಲ್ಲಿ ಭುವನೇಶ್ವರಿಯ‌‌ ಕಂಚಿನ ಪ್ರತಿಮೆ‌ ನಿರ್ಮಾಣಕ್ಕೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ತಜ್ಞರು ಅಂಗೀಕರಿಸಿದ ಕನ್ನಡತಾಯಿ ಭುವನೇಶ್ವರಿ ವಿಗ್ರಹವನ್ನೇ ಇಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹ ನಿರ್ಮಾಣದ ಜವಾಬ್ದಾರಿಯನ್ನು ಕರ್ನಾಟಕ ಶಿಲ್ಪಕಲಾ ಅಕಾಡೆಮಿಗೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕನ್ನಡ ತಾಯಿ ಭುವನೇಶ್ವರಿಯ ವಿಗ್ರಹವನ್ನು ಸರಕಾರದ ವತಿಯಿಂದ ಇದುವರೆಗೆ ಎಲ್ಲಿಯೂ ನಿರ್ಮಿಸಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದೇವೆ. ಮೂರು ತಿಂಗಳಲ್ಲಿ ಪ್ರತಿಮೆ‌ ನಿರ್ಮಾಣ ಕಾರ್ಯ ಪೂರ್ಣಗೊಳಿಸುವುದಕ್ಕೆ ಸೂಚನೆ‌ ನೀಡಿದ್ದೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಹೇಗಿರಲಿದೆ ವಿಗ್ರಹ
ರಾಜ್ಯದ ಇತಿಹಾಸದಲ್ಲೇ‌ ಇದೇ‌ ಮೊದಲ ಬಾರಿಗೆ ಭುವನೇಶ್ವರಿಯ ಬೃಹತ್ ವಿಗ್ರಹ ನಿರ್ಮಾಣಕ್ಕೆ ಸರಕಾರವೇ ಚಾಲನೆ ನೀಡುತ್ತಿದೆ. ಸುಮಾರು ಮೂವತ್ತು ಅಡಿ ಎತ್ತರದ ಕಂಚಿನ ವಿಗ್ರಹ ಇದಾಗಿರಲಿದ್ದು, ಹತ್ತು ಅಡಿ ಎತ್ತರದ ವೈಭವದ ಪೀಠದಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುತ್ತದೆ. ಇದರ ಜತೆಗೆ ನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಚಿತ್ರಣವೂ ಇಲ್ಲಿರುತ್ತದೆ. ವಿಗ್ರಹ ರಚನೆ ಹಾಗೂ ಸ್ಥಳ‌ನಿರ್ಮಾಣ ಪೂರ್ಣಗೊಳಿಸುವುದಕ್ಕೆ ಮೂರು ತಿಂಗಳು ಕಾಲ‌ಮಿತಿ ನೀಡಲಾಗಿದೆ.

ಸಂಕ್ರಾತಿಯೊಳಗೆ ವಿಗ್ರಹ‌ ನಿರ್ಮಾಣ ಕಾರ್ಯ‌ಪೂರ್ಣಗೊಳಿಸುವಂತೆ ಸೋಮವಾರ ನಡೆದ ಇಲಾಖಾ ಸಭೆಯಲ್ಲಿ ಸಚಿವ ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ. ನವೆಂಬರ್ ತಿಂಗಳಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ಈ ಯೋಜನೆಗೆ ಚಾಲನೆ ಕೊಡಿಸಲು ತೀರ್ಮಾನಿಸಲಾಗಿದೆ.

ಏಕೆ ಈ ಪ್ರಸ್ತಾಪ ?
ರಾಜ್ಯದಲ್ಲಿ ಅನೇಕ ಗಣ್ಯರು ಹಾಗೂ ಸಾಮಾಜಿಕ ಹೋರಾಟಗಾರರ ಪುತ್ಥಳಿ ಹಾಗೂ ಪ್ರತಿಮೆಗಳು ಇವೆ. ಕನ್ನಡಾಂಬೆಯ ವಿಗ್ರಹವನ್ನು ಸರಕಾರ ನಿರ್ಮಿಸಿಲ್ಲ.‌ ಈ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಸಚಿವ ಸುನೀಲ್ ಕುಮಾರ್ ಅವರ ವಿನೂತನ ಚಿಂತನೆಯ ಫಲವಾಗಿ ಚಾಲನೆ ದೊರಕಿದೆ. ಇದರಿಂದ ಕಲಾಗ್ರಾಮ ನಗರದ ಪ್ರಮುಖ ಪ್ರವಾಸಿ ತಾಣವಾಗಿಯೂ ಅಭಿವೃದ್ಧಿಯಾಗಲಿದೆ. ಇಲ್ಲಿ‌ ಸ್ಥಾಪನೆಯಾಗಿರುವ ಸುಸಜ್ಜಿತ ಆಡಿಟೋರಿಯಂನಲ್ಲಿ‌ ಪ್ರತಿ ದಿನವೂ ಕಾರ್ಯಕ್ರಮ ಆಯೋಜನೆ ಮಾಡುವುದಕ್ಕೆ‌ ಯೋಜನೆ ರೂಪಿಸುವಂತೆ ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT