ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ರಾಜ್ಯ ಸರ್ಕಾರದ ಮಹತ್ವದ ನಡೆ

ಮುಂಬರುವ ವಿಧಾನಸಭೆ ಚುನಾವಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ನಡೆ ಇಟ್ಟಿದ್ದು, 24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ನಡೆ ಇಟ್ಟಿದ್ದು, 24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಹೌದು.. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ 24 ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ. 2019ರಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು.

ಈ ಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ. ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ನಿಗಮ, ಮಂಡಳಿಗಳ ನೂತನ ನೇಮಕಾತಿ ಇಂತಿದೆ.
ಅಧ್ಯಕ್ಷರ ಹೆಸರು– ನಿಗಮ/ಮಂಡಳಿ/ಪ್ರಾಧಿಕಾರ

ಎಂ. ಸರವಣ– ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ದೇವೇಂದ್ರನಾಥ ಕೆ. ನಾದ್‌– ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ
ಚಂಗಾವರ ಮಾರಣ್ಣ– ಕಾಡುಗೊಲ್ಲ ಅಭಿವೃದ್ಧಿ ನಿಗಮ
ಕೆ.ಪಿ. ವೆಂಕಟೇಶ್‌– ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಎಂ.ಕೆ. ಶ್ರೀನಿವಾಸ್‌ (ಮಿರ್ಲೆ)– ವಸ್ತು ಪ್ರದರ್ಶನ ಪ್ರಾಧಿಕಾರ
ಎಂ.ಕೆ. ವಾಸುದೇವ್‌– ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ
ಎನ್‌.ಎಂ. ರವಿನಾರಾಯಣ ರೆಡ್ಡಿ– ದ್ರಾಕ್ಷಿ ಮತ್ತು ವೈನ್‌ ಮಂಡಳಿ
ಚಂದ್ರಶೇಖರ ಕವಟಗಿ– ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ
ಬಿ.ಸಿ. ನಾರಾಯಣಸ್ವಾಮಿ– ರೇಷ್ಮೆ ಮಾರಾಟ ಮಂಡಳಿ
ಗೌತಮ್‌ ಗೌಡ ಎಂ.– ರೇಷ್ಮೆ ಉದ್ಯಮಗಳ ನಿಗಮ
ಮಣಿರಾಜ ಶೆಟ್ಟಿ– ಗೇರು ಅಭಿವೃದ್ಧಿ ನಿಗಮ
ಗೋವಿಂದ ಜಟ್ಟಪ್ಪ ನಾಯ್ಕ– ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ
ಎಂ. ಶಿವಕುಮಾರ್‌– ಮೃಗಾಲಯ ಪ್ರಾಧಿಕಾರ
ಎನ್‌. ರೇವಣಪ್ಪ ಕೋಳಗಿ– ಅರಣ್ಯ ಅಭಿವೃದ್ಧಿ ನಿಗಮ
ಎನ್‌.ಎಂ. ರವಿ ಕಾಳಪ್ಪ– ಜೀವವೈವಿಧ್ಯ ಮಂಡಳಿ
ಎ.ವಿ. ತೀರ್ಥರಾಮ– ಮೀನುಗಾರಿಕೆ ಅಭಿವೃದ್ಧಿ ನಿಗಮ
ಎಂ.ಎಸ್‌. ಕರಿಗೌಡ್ರ– ಮಾರ್ಕೆಟಿಂಗ್‌ ಕಮ್ಯುನಿಕೇಷನ್ಸ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌
ರಘು ಕೌಟಿಲ್ಯ– ಮೈಸೂರು ಪೇಂಟ್ಸ್‌ ಮತ್ತು ವಾರ್ನಿಷ್‌ ನಿಯಮಿತ
ಗುತ್ತಿಗನೂರು ವಿರುಪಾಕ್ಷಗೌಡ– ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ
ಕೆ.ವಿ. ನಾಗರಾಜ– ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ಮಾರುತಿ ಮಲ್ಲಪ್ಪ ಅಷ್ಟಗಿ– ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ
ಕೊಲ್ಲಾ ಶೇಷಗಿರಿ ರಾವ್‌– ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಜಿ. ನಿಜಗುಣರಾಜು– ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ– ರಾಜ್ಯ ಮದ್ಯಪಾನ ಸಂಯಮ ಮಂಡಳಿ
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!