ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಎಲ್ ಇಟಿ ಉಗ್ರನ ಬಂಧನ, ನಾಲ್ವರು ವಶಕ್ಕೆ

ರಾಜ್ಯದ ಪೊಲೀಸರು ಬೆಂಗಳೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಲಷ್ಕರ್ ಇ- ತೊಯ್ಬಾ ಸಂಘಟನೆಯ ಓರ್ವ ಉಗ್ರ ಹಾಗೂ ಮತ್ತಿತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಬೆಂಗಳೂರು: ರಾಜ್ಯದ ಪೊಲೀಸರು ಬೆಂಗಳೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಲಷ್ಕರ್ ಇ- ತೊಯ್ಬಾ ಸಂಘಟನೆಯ ಓರ್ವ ಉಗ್ರ ಹಾಗೂ ಮತ್ತಿತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ಗುಪ್ತಚರ ವಿಭಾಗದ ಸಮನ್ವಯದಲ್ಲಿ ಸಿಸಿಬಿ ವಿಶೇಷ ವಿಭಾಗ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ಅಸ್ಸಾಂನಿಂದ ಬಂದಿದ್ದ ಅಖ್ತರ್ ಹುಸೇನ್ ಲಷ್ಕರ್ ಎಂಬ ಶಂಕಿತ ಉಗ್ರನ ನಿವಾಸದ ಮೇಲೆ ದಾಳಿ ನಡೆಸಿದೆ. 30ಕ್ಕೂ ಹೆಚ್ಚು ಸಿಬ್ಬಂದಿಯನ್ನೊಳಗೊಂಡ ತಂಡದಿಂದ ಈ ಕಾರ್ಯಾಚರಣೆ ನಡೆದಿದೆ.

ಶಂಕಿತ ಭಯೋತ್ಪಾದಕ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ತಿಲಕನಗರ ಸಮೀಪ ಇತರರೊಂದಿಗೆ ವಾಸವಾಗಿದ್ದ ಎನ್ನಲಾಗಿದೆ. ಈ ಕೇಸ್ ಸಂಬಂಧ ಬೆಂಗಳೂರು ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಬೇಕಾಗಿದೆ. ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಐವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜೂನ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ತಾಲಿಬ್ ಹುಸೇನ್‌ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಬೆಂಗಳೂರು ಭಯೋತ್ಪಾದಕರು ಮತ್ತು ದೇಶ ವಿರೋಧಿ ಶಕ್ತಿಗಳ ಸುರಕ್ಷಿತ ನೆಲೆಯಾಗುತ್ತಿದೆ ಎಂಬ ಚರ್ಚೆ ಹುಸೇನ್ ಬಂಧನದಿಂದ ಮುನ್ನೆಲೆಗೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT