ಸಾಂದರ್ಭಿಕ ಚಿತ್ರ 
ರಾಜ್ಯ

ಕಚೇರಿಗೆ ತಡವಾಗಿ ಬರುವ ಸರ್ಕಾರಿ ನೌಕರರ ವಿರುದ್ಧ ಕ್ರಮ: ಮುಖ್ಯ ಕಾರ್ಯದರ್ಶಿ ಆದೇಶ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.

ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು, ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT