ಸಾಂದರ್ಭಿಕ ಚಿತ್ರ 
ರಾಜ್ಯ

ಕಚೇರಿಗೆ ತಡವಾಗಿ ಬರುವ ಸರ್ಕಾರಿ ನೌಕರರ ವಿರುದ್ಧ ಕ್ರಮ: ಮುಖ್ಯ ಕಾರ್ಯದರ್ಶಿ ಆದೇಶ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.

ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು, ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?