ಶಾಲೆ (ಸಂಗ್ರಹ ಚಿತ್ರ) 
ರಾಜ್ಯ

ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ದತ್ತು ಪಡೆಯಲು ಅಧಿಕಾರಿಗಳಿಗೆ ಸೂಚನೆ

ತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಆದೇಶಿಸಿದ್ದಾರೆ. 

ಬೆಂಗಳೂರು: ತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಆದೇಶಿಸಿದ್ದಾರೆ. 

ಇದು ಕೇವಲ ಶಿಕ್ಷಣ ಇಲಾಖೆ ಮಾತ್ರವಲ್ಲದೇ ತಾಲೂಕು ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗೂ ಅನ್ವಯವಾಗಲಿದೆ. 

ದತ್ತು ಸ್ವೀಕರಿಸುವ ಸಂಸ್ಥೆಯ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಆದೇಶದಲ್ಲಿ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ. 

ರಾಜ್ಯದಲ್ಲಿ 47,000 ಸರ್ಕಾರಿ ಶಾಲೆಗಳು ಹಾಗೂ 1,200 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿವೆ.
 
ದತ್ತು ಪಡೆದ ಸಂಸ್ಥೆಗೆ ಅಧಿಕಾರಿಗಳು ತಿಂಗಳಿಗೆ ಒಮ್ಮೆ ಅಥವಾ ಎರಡು ಬಾರಿ ಭೇಟಿ ನೀಡಬೇಕು.  ಈ ವೇಳೆ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಬೇಕು ಹಾಗೂ ಸೂಕ್ತ ನಿರ್ದೇಶನಗಳನ್ನು ನೀಡಬೇಕು, ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಬೇಕು, ಅವರ ಆಸಕ್ತಿಗಳನ್ನು ಅರಿಯಬೇಕು ಹಾಗೂ ಜೀವನದಲ್ಲಿ ಗುರಿ ಹೊಂದಲು ಪ್ರೇರೇಪಿಸಬೇಕು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
 
ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಇತರ ಉನ್ನತ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳನ್ನು ದತ್ತು ಪಡೆಯುವುದಕ್ಕೆ ಹಂಚಿಕೆ ಮಾಡಲಿದ್ದಾರೆ.

ದತ್ತು ಪಡೆಯಲು ಹಂಚಿಕೆ ಮಾಡಲಿರುವ ಶಾಲೆಗಳ ಪೈಕಿ ಬಹುತೇಕ ಶಾಲೆಗಳು ಗ್ರಾಮೀಣ ಶಾಲೆಗಳಾಗಿರಲಿದ್ದು, ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಇಲಾಖೆ, ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿರಲಿದ್ದು ಮಾಸಿಕ ವರದಿ ಸಲ್ಲಿಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT