ಬಾಣಸವಾಡಿ ಮುಖ್ಯರಸ್ತೆಯಲ್ಲಿರುವ ಭೂಮಿ 
ರಾಜ್ಯ

42 ವರ್ಷಗಳ ನಂತರ, ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಭೂಮಿ ಸ್ವಾಧೀನಕ್ಕೆ ಬಿಡಿಎಗೆ ಸುಪ್ರೀಂ ಅನುಮತಿ

ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಸುಮಾರು 70 ಕೋಟಿ ರೂಪಾಯಿ ಮೌಲ್ಯದ 3 ಎಕರೆ 23 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ(ಬಿಡಿಎ) ಸುಪ್ರೀಂ ಕೋರ್ಟ್ ಸೋಮವಾರ...

ಬೆಂಗಳೂರು: ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಸುಮಾರು 70 ಕೋಟಿ ರೂಪಾಯಿ ಮೌಲ್ಯದ 3 ಎಕರೆ 23 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. 

ಬಾಣಸವಾಡಿ ಮುಖ್ಯರಸ್ತೆಯಲ್ಲಿರುವ ಈ ಆಸ್ತಿಯನ್ನು ಬಿಟ್ಟು ಕೊಡಲು ನಿರಾಕರಿಸಿದ ಕುಟುಂಬದಿಂದ ಭೂಮಿ ಸ್ವಾಧೀನಪಡಿಸಿಕೊಳ್ಳಲು ಬಿಡಿಎ 42 ವರ್ಷಗಳಿಂದ ಕಾನೂನು ಹೋರಾಟ ನಡೆಸಿದ್ದು, ಪ್ರಕರಣ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

“ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಬಿಡಿಎ ಉತ್ತರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜಿ ಕುಮಾರ್ ಅವರು, ಇದೊಂದು ಮಹತ್ವದ ತೀರ್ಪು. ಈ ಹಿಂದೆಯೇ ಬಿಡಿಎ ಇಲ್ಲಿ ಲೇಔಟ್ ಅಭಿವೃದ್ಧಿಪಡಿಸಿದ್ದು, ವ್ಯಾಜ್ಯಗಳಿಂದಾಗಿ ಈ ಭಾಗವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ನಾವು 1980 ರಿಂದ ಕಾನೂನು ಹೋರಾಟ ನಡೆಸಿದ್ದೇವೆ. ಅಂತಿಮವಾಗಿ ಭೂಮಿ ನಮ್ಮ ವಶಕ್ಕೆ ಬರುತ್ತಿದ್ದು, ಈಗ ನಾವು ಈ ಆಸ್ತಿಯಲ್ಲಿ 40x60 ಚದರ ಅಡಿಯ 35 ಸೈಟ್‌ಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಹೇಳಿದ್ದಾರೆ.

ಈ ಜಾಗದಲ್ಲಿ ನಮ್ಮಿಂದ ಸೈಟ್ ಪಡೆಯಲು 10 ರಿಂದ 15 ವರ್ಷಗಳಿಂದ ಕಾಯುತ್ತಿರುವ ಕ್ರೀಡಾಪಟುಗಳು ಅಥವಾ ಪ್ರಶಸ್ತಿ ವಿಜೇತರಂತಹ ವಿಶೇಷ ವರ್ಗದ ಸೈಟ್ ಹಂಚಿಕೆದಾರರಿಗೆ ನಾವು ಇದನ್ನು ಹಸ್ತಾಂತರಿಸುತ್ತೇವೆ ಎಂದು ಜಿ ಕುಮಾರ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

"ಡಿನೋಟಿಫಿಕೇಶನ್ ಆದೇಶಗಳಿಂದ ಅರ್ಕಾವತಿ ಲೇಔಟ್‌ನಲ್ಲಿ ತಮ್ಮ ಸೈಟ್‌ಗಳನ್ನು ಕಳೆದುಕೊಂಡ ಅನೇಕರು ಪರ್ಯಾಯ ಸೈಟ್‌ಗಳಿಗಾಗಿ ಕಾಯುತ್ತಿದ್ದಾರೆ ಮತ್ತು ಅವರಿಗೆ ಇಲ್ಲಿ ಸೈಟ್‌ಗಳನ್ನು ಒದಗಿಸಬಹುದು" ಎಂದು ಅವರು ಹೇಳಿದ್ದಾರೆ.

ಬಿಡಿಎ 1977 ರಲ್ಲಿ ನಾರಾಯಣ ರೆಡ್ಡಿ ಅವರಿಗೆ ಸೇರಿದ್ದ (ಸರ್ವೆ ನಂ. 345) ಆಸ್ತಿಯನ್ನು ಪ್ರಾಥಮಿಕ ಸ್ವಾಧೀನಕ್ಕಾಗಿ ಅಧಿಸೂಚನೆ ಹೊರಡಿಸಿತ್ತು ಮತ್ತು 1980 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೆ ಅವರ ಕುಟುಂಬ ಬಿಡಿಎ ಅಧಿಸೂಚನೆ ವಿರುದ್ಧ ಕೋರ್ಟ್ ಮೆಟ್ಟಿಲೇರಿತ್ತು ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT