ಫಾಜಿಲ್ ಹತ್ಯೆ 
ರಾಜ್ಯ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ!

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ.

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ.

ಸುರತ್ಕಲ್ ನ ಎಸ್ ಕೆ ಮೊಬೈಲ್ ಅಂಗಡಿ ಬಳಿ ಘಟನೆ ನಡೆದಿದೆ. ಮೂವರು ಯುವಕರ ತಂಡ ಫಾಜಿಲ್ ಮಂಗಳಪೇಟೆ ಎಂಬಾತನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಫಾಜಿಲ್ ನನ್ನು ಸ್ಥಳೀಯರು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸೂರತ್ಕಲ್ ನಲ್ಲಿ ಬಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT