ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ: ಉಡುಪಿ ಬಿಜೆಪಿಯಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಮುಂದುವರಿದಿದ್ದು, ಬೈಲಕೆರೆ, ಮಲ್ಪೆ, ತೆಂಕನಿಡಿಯೂರು ಭಾಗದಲ್ಲಿ ಪಕ್ಷದ 50ಕ್ಕೂ ಹೆಚ್ಚು ಕಾರ್ಯಕರ್ತರು ಗುರುವಾರ...

ಉಡುಪಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಮುಂದುವರಿದಿದ್ದು, ಬೈಲಕೆರೆ, ಮಲ್ಪೆ, ತೆಂಕನಿಡಿಯೂರು ಭಾಗದಲ್ಲಿ ಪಕ್ಷದ 50ಕ್ಕೂ ಹೆಚ್ಚು ಕಾರ್ಯಕರ್ತರು ಗುರುವಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ತೆಂಕನಿಡಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ ಪ್ರಕಾಶ್ ಬೈಲಕೆರೆ, ಉಡುಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶರತ್ ಕುಮಾರ್, ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅರುಣ್ ಜಠಾಣ, ತೆಂಕನಿಡಿಯೂರು ವಾರ್ಡ್ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ, ಪಂಚಾಯಿತಿ ಸದಸ್ಯೆ ವಿಕಿತಾ ಸುರೇಶ್ ಕೂಡ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಪ್ರವೀಣ್ ನೆಟ್ಟರ್ ಹತ್ಯೆಯಿಂದ ತಮಗೆ ನೋವಾಗಿದ್ದು, ಹಿಂದೂ ಕಾರ್ಯಕರ್ತರ ಜೀವಕ್ಕೆ ಭದ್ರತೆ ಇಲ್ಲದಂತಾಗಿದೆ. ‘‘ರಾಜ್ಯ ಸರಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ಕಾರಣ ನೋವಿನಿಂದ ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇವೆ’’ ಎಂದು ಹೇಳಿದ್ದಾರೆ.

ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವ ಜಿಲ್ಲಾ ಬಿಜೆಪಿಯ ಮತ್ತೊಂದು ಘಟಕದ ಸಂಚಾಲಕ- ಸಂತೋಷ್ ಡಿ ಸುವರ್ಣ ಕೂಡ ಇಂದು ರಾಜೀನಾಮೆ ನೀಡಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿದ್ದರೂ ಬೆಳ್ಳಾರೆಯಲ್ಲಿ ಪಕ್ಷದ ಕಾರ್ಯಕರ್ತ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. 

‘‘ನಮ್ಮ ನಾಯಕರು ತಮ್ಮ ಮನಸ್ಥಿತಿಯನ್ನು ಬದಲಾಯಿಸುವವರೆಗೆ ಮತ್ತು ಪಕ್ಷದ ಕಾರ್ಯಕರ್ತರ ಸುರಕ್ಷತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವವರೆಗೆ ನಾನು ಪಕ್ಷಕ್ಕಾಗಿ ಕೆಲಸ ಮಾಡುವುದಿಲ್ಲ. ಆದರೆ ನಾನು ಹಿಂದುತ್ವದ ಉದ್ದೇಶಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜೀನಾಮೆ ನೀಡಿದವರ ಮನವೊಲಿಕೆಗೆ ನಾಯಕರು ಮುಂದಾಗಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ‘‘ಇದು ಸೂಕ್ಷ್ಮ ವಿಷಯವಾಗಿರುವುದರಿಂದ ಮತ್ತು ಪಕ್ಷದ ಕಾರ್ಯಕರ್ತರ ಭಾವನೆಗಳು ಸ್ಪಷ್ಟವಾಗಿರುವುದರಿಂದ ನಮ್ಮ ನಾಯಕರು ಹಿಂದೆ ಸರಿಯುವಂತೆ ಹೇಳಿಲ್ಲ’’ ಎಂದು ಮೂಲಗಳು ತಿಳಿಸಿವೆ. ವಾಸ್ತವವಾಗಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆಯಬೇಕಿದ್ದ ಪಕ್ಷದ ಕಾರ್ಯಕರ್ತರ ಸಭೆಯನ್ನು ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT