ಸುರತ್ಕಲ್ ನ ಫಾಜಿಲ್ ಹತ್ಯೆ 
ರಾಜ್ಯ

ಕರಾವಳಿಯಲ್ಲಿ ಮತ್ತೊಂದು ಕೊಲೆ: 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಮದ್ಯದಂಗಡಿ ಬಂದ್!

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಕೊಲೆಯಾದ ಬೆನ್ನಲ್ಲೇ ಮಂಗಳೂರಿನ 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಕೊಲೆಯಾದ ಬೆನ್ನಲ್ಲೇ ಮಂಗಳೂರಿನ 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹೌದು.. ಪ್ರವೀಣ್ ನೆಟ್ಟಾರ(Praveen Nettar) ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಕೊಲೆ(Murder) ನಡೆದಿದೆ. ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರಿನಲ್ಲಿ ಯುವಕನ  ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ನ ಎಸ್.ಕೆ.ಮೊಬೈಲ್ಸ್​ ಅಂಗಡಿ ಬಳಿ ಫಾಜಿಲ್​ ಮಂಗಲಪೇಟೆ(23) ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.

ಗಾಯಾಳು ಫಾಜಿಲ್​ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನಿಷೇಧಾಜ್ಞೆ ಜಾರಿ
ಇನ್ನು ಸರಣಿ ಹತ್ಯೆ ಬೆನ್ನಲ್ಲೇ ಮಂಗಳೂರು ನಗರ ವ್ಯಾಪ್ತಿಯ 4 ಪೊಲೀಸ್ ಠಾಣಾ ಸರಹದ್ದಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶನಿವಾರದವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಸುರತ್ಕಲ್, ಪಣಂಬೂರು, ಮುಳ್ಳಿ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗಿನ ಜಾವದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಸದ್ಯ ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಹಾಗೂ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸುರತ್ಕಲ್‌ನಲ್ಲಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಮಂಗಳೂರಿನ ಸುರತ್ಕಲ್‌ಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ರವಾನಿಸಲಾಗಿದೆ. ಮೂವರು ದುಷ್ಕರ್ಮಿಗಳು ಅಟ್ಟಾಡಿಸಿ ಫಾಜಿಲ್ ಮೇಲೆ ಹಲ್ಲೆಗೈದಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ಫಾಜಿಲ್​ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ಫಾಜಿಲ್​ ಸುರತ್ಕಲ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು ಫಾಜಿಲ್ ಮೇಲೆ ದಾಳಿ ನಡೆದ ಕೂಡಲೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲಾಗಿದೆ ಎಂದು ಕೆಲ ಹಿಂದುತ್ವವಾದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT