ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಹತ್ಯೆಯಾದ ಸ್ಥಳ 
ರಾಜ್ಯ

ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ: ಮಂಗಳೂರು ಸುತ್ತಮುತ್ತ ಇಂದು ಶಾಲಾ-ಕಾಲೇಜುಗಳಿಗೆ ರಜೆ, 12 ಮಂದಿ ವಶಕ್ಕೆ, ಪೊಲೀಸರು ಹೈ ಅಲರ್ಟ್

ಕರಾವಳಿ ಜಿಲ್ಲೆ ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿದ್ದಾರೆ.

ಮಂಗಳೂರು: ಕರಾವಳಿ ಜಿಲ್ಲೆ ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿದ್ದಾರೆ.

ಫಾಜಿಲ್ ಮಂಗಲಪೇಟೆ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್​ ಹಾಕಲಾಗಿದ್ದು, ಸುರತ್ಕಲ್​ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಂಗಳೂರು ಸುತ್ತಮುತ್ತ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.

ಶಾಲೆ-ಕಾಲೇಜುಗಳಿಗೆ ರಜೆ: ಇಂದು ಸುರತ್ಕಲ್, ಮೂಲ್ಕಿ, ಪಣಂಬೂರು, ಬಜ್ಪೆಗಳಲ್ಲಿ ಮುನ್ನೆಚ್ಚರಿಕೆ, ಭದ್ರತೆ ಕ್ರಮವಾಗಿ ಸುರಕ್ಷತೆ ಹಿತದೃಷ್ಟಿಯಿಂದ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. 

ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ಮಂಗಳೂರು ನಗರದಲ್ಲಿ ನಾಳೆ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ನಗರದಲ್ಲಿ ಮದ್ಯದಂಗಡಿ ಬಂದ್ ಆಗಿರುತ್ತದೆ.

12 ಮಂದಿ ಬಂಧನ: ಕಳೆದ ರಾತ್ರಿ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದು ಇಂದು 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT