ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆ !

ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು  ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು  ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ವಸಂತ ನಗರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜು ಮುಗಿದ ನಂತರ ಇಬ್ಬರು ವಿದ್ಯಾರ್ಥಿನಿಯರು ಕಂಬೈನ್ ಸ್ಟಡಿ ಮಾಡಲು ತಮ್ಮ ಮನೆಯಲ್ಲಿ ಭೇಟಿಯಾಗುತ್ತಿದ್ದರು ಎಂದು ಪೋಷಕರು ತಿಳಿಸಿದ್ದಾರೆ. ಸೋಮವಾರ ಪುಸ್ತಕ ಕೊಡುವ ನೆಪದಲ್ಲಿ ಹೊರಟ ವಿದ್ಯಾರ್ಥಿನಿ ಸಂಜೆಯವರೆಗೂ ಮನೆಗೆ ಬಾರಲಿಲ್ಲ, ಹೀಗಾಗಿ ಆಕೆಯ ತಂದೆ ಆಕೆಗೆ ಕರೆ ಮಾಡಿದ್ದಾರೆ.

ಈ ವೇಳೆ ತಾನು ಮನೆಗೆ ಬರುವುದು ತಡವಾಗುತ್ತದೆ ಎಂದು ಹೇಳಿದ್ದಾಳೆ. ಇದಕ್ಕೆ ಕೋಪಗೊಂಡ ಆಕೆಯ ತಂದೆ ಏರು ಧ್ವನಿಯಲ್ಲಿ ಮಾತನಾಡಿ ಏಕೆ ತಡವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ, ಕೂಡಲೇ ಆಕೆ ಕರೆಯನ್ನು ಕಟ್ ಮಾಡಿದ್ದಾಳೆ. ಇದಾದ ನಂತರ ಆಕೆಯ ತಂದೆ ಅವಳನ್ನು ಸಂಪರ್ಕಿಸಲು ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ ಮೇಸೆಜ್ ಕಳುಹಿಸಿದ್ದ ವಿದ್ಯಾರ್ಥಿನಿ ನಾನು ನನ್ನ ಸ್ನೇಹಿತೆಯೊಂದಿಗೆ ಹೋಗುತ್ತಿರುವುದಾಗಿಯೂ, ಹುಡುಕುವ ಪ್ರಯತ್ನ ಮಾಡದಂತೆ ತಿಳಿಸಿದ್ದಾಳೆ.

ನಂತರ ಅವರು, ಆಕೆಯ ಸ್ನೇಹಿತೆಯ ಪೋಷಕರಿಗೆ ಕರೆ ಮಾಡಿದಾಗ, 2 ದಿನಗಳಿಂದ ಮನೆಗೆ ಬಂದಿಲ್ಲವೆಂದು ಅವರು ಮಾಹಿತಿ ನೀಡಿದ್ದಾರೆ. ಆಘಾತಕ್ಕೊಳಗಾದ ಇಬ್ಬರು ಬಾಲಕಿಯರ ಪೋಷಕರು ಸ್ನೇಹಿತರು ಮತ್ತು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಯಾವುದೇ ಸುಳಿವು ಸಿಗದಿದ್ದಾಗ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿದ ಹುಡುಗಿಯರ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ. ಕೇರಳ ಮತ್ತು ತಮಿಳುನಾಡು ಸೇರಿದಂತೆ ಎಲ್ಲಾ ಠಾಣೆಗಳಿಗೂ ಸಂದೇಶ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT