ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆ !

ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು  ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು  ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ವಸಂತ ನಗರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜು ಮುಗಿದ ನಂತರ ಇಬ್ಬರು ವಿದ್ಯಾರ್ಥಿನಿಯರು ಕಂಬೈನ್ ಸ್ಟಡಿ ಮಾಡಲು ತಮ್ಮ ಮನೆಯಲ್ಲಿ ಭೇಟಿಯಾಗುತ್ತಿದ್ದರು ಎಂದು ಪೋಷಕರು ತಿಳಿಸಿದ್ದಾರೆ. ಸೋಮವಾರ ಪುಸ್ತಕ ಕೊಡುವ ನೆಪದಲ್ಲಿ ಹೊರಟ ವಿದ್ಯಾರ್ಥಿನಿ ಸಂಜೆಯವರೆಗೂ ಮನೆಗೆ ಬಾರಲಿಲ್ಲ, ಹೀಗಾಗಿ ಆಕೆಯ ತಂದೆ ಆಕೆಗೆ ಕರೆ ಮಾಡಿದ್ದಾರೆ.

ಈ ವೇಳೆ ತಾನು ಮನೆಗೆ ಬರುವುದು ತಡವಾಗುತ್ತದೆ ಎಂದು ಹೇಳಿದ್ದಾಳೆ. ಇದಕ್ಕೆ ಕೋಪಗೊಂಡ ಆಕೆಯ ತಂದೆ ಏರು ಧ್ವನಿಯಲ್ಲಿ ಮಾತನಾಡಿ ಏಕೆ ತಡವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ, ಕೂಡಲೇ ಆಕೆ ಕರೆಯನ್ನು ಕಟ್ ಮಾಡಿದ್ದಾಳೆ. ಇದಾದ ನಂತರ ಆಕೆಯ ತಂದೆ ಅವಳನ್ನು ಸಂಪರ್ಕಿಸಲು ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ ಮೇಸೆಜ್ ಕಳುಹಿಸಿದ್ದ ವಿದ್ಯಾರ್ಥಿನಿ ನಾನು ನನ್ನ ಸ್ನೇಹಿತೆಯೊಂದಿಗೆ ಹೋಗುತ್ತಿರುವುದಾಗಿಯೂ, ಹುಡುಕುವ ಪ್ರಯತ್ನ ಮಾಡದಂತೆ ತಿಳಿಸಿದ್ದಾಳೆ.

ನಂತರ ಅವರು, ಆಕೆಯ ಸ್ನೇಹಿತೆಯ ಪೋಷಕರಿಗೆ ಕರೆ ಮಾಡಿದಾಗ, 2 ದಿನಗಳಿಂದ ಮನೆಗೆ ಬಂದಿಲ್ಲವೆಂದು ಅವರು ಮಾಹಿತಿ ನೀಡಿದ್ದಾರೆ. ಆಘಾತಕ್ಕೊಳಗಾದ ಇಬ್ಬರು ಬಾಲಕಿಯರ ಪೋಷಕರು ಸ್ನೇಹಿತರು ಮತ್ತು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಯಾವುದೇ ಸುಳಿವು ಸಿಗದಿದ್ದಾಗ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿದ ಹುಡುಗಿಯರ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ. ಕೇರಳ ಮತ್ತು ತಮಿಳುನಾಡು ಸೇರಿದಂತೆ ಎಲ್ಲಾ ಠಾಣೆಗಳಿಗೂ ಸಂದೇಶ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT