ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆ !

ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು  ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು  ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ವಸಂತ ನಗರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜು ಮುಗಿದ ನಂತರ ಇಬ್ಬರು ವಿದ್ಯಾರ್ಥಿನಿಯರು ಕಂಬೈನ್ ಸ್ಟಡಿ ಮಾಡಲು ತಮ್ಮ ಮನೆಯಲ್ಲಿ ಭೇಟಿಯಾಗುತ್ತಿದ್ದರು ಎಂದು ಪೋಷಕರು ತಿಳಿಸಿದ್ದಾರೆ. ಸೋಮವಾರ ಪುಸ್ತಕ ಕೊಡುವ ನೆಪದಲ್ಲಿ ಹೊರಟ ವಿದ್ಯಾರ್ಥಿನಿ ಸಂಜೆಯವರೆಗೂ ಮನೆಗೆ ಬಾರಲಿಲ್ಲ, ಹೀಗಾಗಿ ಆಕೆಯ ತಂದೆ ಆಕೆಗೆ ಕರೆ ಮಾಡಿದ್ದಾರೆ.

ಈ ವೇಳೆ ತಾನು ಮನೆಗೆ ಬರುವುದು ತಡವಾಗುತ್ತದೆ ಎಂದು ಹೇಳಿದ್ದಾಳೆ. ಇದಕ್ಕೆ ಕೋಪಗೊಂಡ ಆಕೆಯ ತಂದೆ ಏರು ಧ್ವನಿಯಲ್ಲಿ ಮಾತನಾಡಿ ಏಕೆ ತಡವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ, ಕೂಡಲೇ ಆಕೆ ಕರೆಯನ್ನು ಕಟ್ ಮಾಡಿದ್ದಾಳೆ. ಇದಾದ ನಂತರ ಆಕೆಯ ತಂದೆ ಅವಳನ್ನು ಸಂಪರ್ಕಿಸಲು ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ ಮೇಸೆಜ್ ಕಳುಹಿಸಿದ್ದ ವಿದ್ಯಾರ್ಥಿನಿ ನಾನು ನನ್ನ ಸ್ನೇಹಿತೆಯೊಂದಿಗೆ ಹೋಗುತ್ತಿರುವುದಾಗಿಯೂ, ಹುಡುಕುವ ಪ್ರಯತ್ನ ಮಾಡದಂತೆ ತಿಳಿಸಿದ್ದಾಳೆ.

ನಂತರ ಅವರು, ಆಕೆಯ ಸ್ನೇಹಿತೆಯ ಪೋಷಕರಿಗೆ ಕರೆ ಮಾಡಿದಾಗ, 2 ದಿನಗಳಿಂದ ಮನೆಗೆ ಬಂದಿಲ್ಲವೆಂದು ಅವರು ಮಾಹಿತಿ ನೀಡಿದ್ದಾರೆ. ಆಘಾತಕ್ಕೊಳಗಾದ ಇಬ್ಬರು ಬಾಲಕಿಯರ ಪೋಷಕರು ಸ್ನೇಹಿತರು ಮತ್ತು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಯಾವುದೇ ಸುಳಿವು ಸಿಗದಿದ್ದಾಗ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿದ ಹುಡುಗಿಯರ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ. ಕೇರಳ ಮತ್ತು ತಮಿಳುನಾಡು ಸೇರಿದಂತೆ ಎಲ್ಲಾ ಠಾಣೆಗಳಿಗೂ ಸಂದೇಶ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!