ಮಲೆ ಮಾದೇಶ್ವರ ದೇವಾಲಯ 
ರಾಜ್ಯ

ಉಘೇ ಮಾದೇಶ್ವರ: ಸಿಬ್ಬಂದಿ ಎಡವಟ್ಟಿನಿಂದ ಭಕ್ತನ ಬಾಯಿಗೆ ಬಂದು ಬಿತ್ತು 'ಲಡ್ಡು'; ಪ್ರಸಾದದ ಜೊತೆಗೆ ಕೈ ಸೇರಿತು ಎರಡು ಲಕ್ಷ ರು. ದುಡ್ಡು!

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ದಿನಾಲೂ ಸಾವಿರಾರು ಭಕ್ತರು ಬರುತ್ತಾರೆ. ಅದರಲ್ಲೂ ಅಮಾವಾಸ್ಯೆ ದಿನದಂದು ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಾನಕ್ಕೆ ಆಗಮಿಸಿದ್ದರು.

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ದಿನಾಲೂ ಸಾವಿರಾರು ಭಕ್ತರು ಬರುತ್ತಾರೆ. ಅದರಲ್ಲೂ ಅಮಾವಾಸ್ಯೆ ದಿನದಂದು ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಾನಕ್ಕೆ ಆಗಮಿಸಿದ್ದರು.

ಗುರುವಾರ ಭೀಮನ ಅಮಾವಾಸ್ಯೆ ಆಗಿದ್ದರಿಂದ ಲಕ್ಷಾಂತರ ಭಕ್ತರು ಮಾದಪ್ಪನ ದರ್ಶನಕ್ಕೆ ಬಂದಿದ್ದರು. ಈ ವೇಳೆ ವಿಶೇಷ ದರ್ಶನ ಮುಗಿಸಿ ಸೇವಾ ಕೌಂಟರ್‌ಗೆ ಬಂದ ಭಕ್ತನಿಗೆ ಇಲ್ಲಿನ ಸಿಬ್ಬಂದಿ ಆಚಾತುರ್ಯವಾಗಿ ಲಾಡು ಪ್ರಸಾದದ ಜೊತೆ 2 ಲಕ್ಷ ಹಣವಿದ್ದ ಬ್ಯಾಗ್ ನೀಡಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ಸಿಬ್ಬಂದಿ ಕಣ್ತಪ್ಪಿನಿಂದ ಪ್ರಸಾದದ ಜೊತೆಗೆ 2 ಲಕ್ಷ ರೂಪಾಯಿ ಭಕ್ತನ ಪಾಲಾಗಿದೆ. ವಿಶೇಷ ದರ್ಶನಕ್ಕೆ ಟಿಕೆಟ್ ನೀಡಲು ಕುಳಿತಿದ್ದ ಸಿಬ್ಬಂದಿ ಭಕ್ತನಿಗೆ ಲಾಡು ಜೊತೆಗೆ ಹಣದ ಚೀಲ ನೀಡಿದ್ದಾರೆ. ಲಾಡು ಪ್ರಸಾದ ಇಟ್ಟಿದ್ದ ಬ್ಯಾಗ್ ಸಮೀಪ ಹಣವನ್ನು ಸಹ ಇಡಲಾಗಿದ್ದ ಹಿನ್ನೆಲೆ ಹಣ ಸಹಿತ ಬ್ಯಾಗ್ ಅನ್ನು ಸಿಬ್ಬಂದಿ ಭಕ್ತನಿಗೆ ನಿಡಿದ್ದಾರೆ.

ಈ ಬ್ಯಾಗನ್ನು ತೆಗೆದುಕೊಂಡ ಭಕ್ತ ನಾಲ್ಕೈದು ಹೆಜ್ಜೆ ಮುಂದೆ ಹೋಗಿ ಬ್ಯಾಗ್ ಒಳಗೆ ನೋಡಿದ್ದಾನೆ. ಅದರಲ್ಲಿ ಹಣವಿರುವುದನ್ನೂ ನೋಡಿದ್ರೂ ಅದನ್ನು ವಾಪಸ್ ಕೊಡದೇ ಹಾಗೇಯೇ ಹೋಗಿದ್ದಾನೆ. ಹಣವಿದ್ದ ಬ್ಯಾಗ್‌ ಅನ್ನು ಭಕ್ತ ಗಮನಿಸಿದರೂ ಕೂಡ ಹಣ ಹಿಂದುರುಗಿಸದೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ.  ಈ ದೃಶ್ಯಾವಳಿ ಸಂಪೂರ್ಣವಾಗಿ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ. ಸದ್ಯ ಭಕ್ತನ ವಿರುದ್ಧ ಮಲೆಮಹದೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT