ಎಡಿಜಿಪಿ ಅಲೋಕ್ ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ 
ರಾಜ್ಯ

ಮಂಗಳೂರು: ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ- ಅಲೋಕ್ ಕುಮಾರ್

ಕೇವಲ 10 ದಿನಗಳ ಅಂತರದಲ್ಲಿ ಮೂವರ ಬರ್ಬರ ಹತ್ಯೆಯಿಂದ ನಲುಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸಮ್ಮುಖದಲ್ಲಿ  ಇಂದು ಶಾಂತಿ ಪಾಲನಾ ಸಭೆ ನಡೆಯಿತು.

ಮಂಗಳೂರು: ಕೇವಲ 10 ದಿನಗಳ ಅಂತರದಲ್ಲಿ ಮೂವರ ಬರ್ಬರ ಹತ್ಯೆಯಿಂದ ನಲುಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸಮ್ಮುಖದಲ್ಲಿ  ಇಂದು ಶಾಂತಿ ಪಾಲನಾ ಸಭೆ ನಡೆಯಿತು. ಮುಸ್ಲಿಂ ಮುಖಂಡರು ಸೇರಿದಂತೆ ಎಲ್ಲಾ ಸಮುದಾಯಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಯಿತು. ನಮ್ಮೊಂದಿಗೆ ಸಹಕರಿಸುವಂತೆ ಅವರಿಗೆ ಮನವಿ ಮಾಡಿದ್ದೇವೆ. ಆದ್ದರಿಂದ ಈ ಪ್ರದೇಶದಲ್ಲಿ ಶಾಂತಿ ಹದಗೆಡುವುದಿಲ್ಲ. ಯುವಕನ ಹತ್ಯೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾರನ್ನು ಬಂಧಿಸಿಲ್ಲ, ಆದರೆ, ಶಂಕಿತರನ್ನು ವಿಚಾರಿಸಲಾಗುತ್ತಿದೆ ಎಂದು ತಿಳಿಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದ ಇಲ್ಲಿಯವರೆಗೂ 37 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಪ್ರಕರಣವನ್ನು ಭೇದಿಸಲಾಗುವುದು, ಇಂಟರ್ ನೆಟ್ ನಿರ್ಬಂಧ ಮೂಲಕ ಸಾಮಾನ್ಯ ಜನರಿಗೆ ತೊಂದರೆ ಕೊಡಲು ಬಯಸುವುದಿಲ್ಲ, ಜವಾಬ್ದಾರಿಯುತವಾಗಿ ಬಳಸಲು ಸೂಚನೆ ನೀಡಲಾಗಿದೆ ಎಂದರು. 

ಶಾಂತಿ ಪಾಲನಾ ಸಭೆಯಲ್ಲಿ ಮುಸ್ಲಿಂ ಮುಖಂಡರು ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಮುಸ್ಲಿಂ ಮುಖಂಡರಿಂದ ಮತ್ತೊಂದು ಸಭೆ ನಡೆದಿದೆ. ಎಲ್ಲಾ ಸಮುದಾಯಗಳ ಮುಖಂಡರನ್ನು ಭೇಟಿ ಮಾಡಿದ್ದು, ಅವುಗಳ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT