ಸಾಂದರ್ಭಿಕ ಚಿತ್ರ 
ರಾಜ್ಯ

ಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧ

ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಮಡಿಕೇರಿ: ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಕೊಡಗು ಪಶುವೈದ್ಯಕೀಯ ಇಲಾಖೆಯು ಅಂತರರಾಜ್ಯ ಹಂದಿಮಾಂಸ ಮಾರಾಟ ಮತ್ತು ಸಾಗಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕೇರಳದಲ್ಲಿ ದೇಶೀಯ ಹಂದಿಗಳ ದೊಡ್ಡ ಜನಸಂಖ್ಯೆಯು ಎಎಸ್ಎಫ್ ಸೋಂಕಿಗೆ ಒಳಗಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಂತಾರಾಜ್ಯ ಹಂದಿಗಳ ಸಾಗಣೆಯನ್ನು ನಿಷೇಧಿಸಿ ಜಿಲ್ಲಾ ಪಶು ವೈದ್ಯಕೀಯ ಇಲಾಖೆ ಅಧಿಸೂಚನೆ ಹೊರಡಿಸಿದೆ.

“ಕೊಡಗು ಸಾಮಾನ್ಯವಾಗಿ ನೆರೆಯ ಕೇರಳ ರಾಜ್ಯಕ್ಕೆ ಹಂದಿ ಮಾಂಸವನ್ನು ಪೂರೈಸುತ್ತದೆ. ಆದರೆ, ಮುಂಜಾಗ್ರತಾ ಕ್ರಮವಾಗಿ ಮಾಂಸ ಸಾಗಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಚೆಕ್‌ಪೋಸ್ಟ್‌ಗಳಿಗೆ ಇಲಾಖೆಯ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಅವರು ಎಎಸ್‌ಎಫ್ ಹರಡುವುದನ್ನು ತಡೆಯಲು ನಿಗಾ ವಹಿಸುತ್ತಾರೆ ಎಂದು ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಡಿಡಿ ಡಾ.ಸುರೇಶ್ ಭಟ್ ತಿಳಿಸಿದ್ದಾರೆ.

ಯಾವುದೇ ಹಂದಿಗಳು ವೈರಸ್ ಸೋಂಕಿಗೆ ಒಳಗಾಗಿದ್ದರೆ ಇಲಾಖೆಗೆ ತಕ್ಷಣ ವರದಿ ಮಾಡುವಂತೆ ಜಿಲ್ಲೆಯ ಹಂದಿ ಸಾಕಾಣಿಕೆದಾರರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಎಎಫ್‌ಎಸ್ ಹಂದಿಗಳಿಂದ ಮನುಷ್ಯರಿಗೆ ಹರಡುವುದಿಲ್ಲ ಮತ್ತು ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಡಾ.ಸುರೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT