ಸಾಂದರ್ಭಿಕ ಚಿತ್ರ 
ರಾಜ್ಯ

ಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧ

ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಮಡಿಕೇರಿ: ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

ಕೊಡಗು ಪಶುವೈದ್ಯಕೀಯ ಇಲಾಖೆಯು ಅಂತರರಾಜ್ಯ ಹಂದಿಮಾಂಸ ಮಾರಾಟ ಮತ್ತು ಸಾಗಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕೇರಳದಲ್ಲಿ ದೇಶೀಯ ಹಂದಿಗಳ ದೊಡ್ಡ ಜನಸಂಖ್ಯೆಯು ಎಎಸ್ಎಫ್ ಸೋಂಕಿಗೆ ಒಳಗಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಂತಾರಾಜ್ಯ ಹಂದಿಗಳ ಸಾಗಣೆಯನ್ನು ನಿಷೇಧಿಸಿ ಜಿಲ್ಲಾ ಪಶು ವೈದ್ಯಕೀಯ ಇಲಾಖೆ ಅಧಿಸೂಚನೆ ಹೊರಡಿಸಿದೆ.

“ಕೊಡಗು ಸಾಮಾನ್ಯವಾಗಿ ನೆರೆಯ ಕೇರಳ ರಾಜ್ಯಕ್ಕೆ ಹಂದಿ ಮಾಂಸವನ್ನು ಪೂರೈಸುತ್ತದೆ. ಆದರೆ, ಮುಂಜಾಗ್ರತಾ ಕ್ರಮವಾಗಿ ಮಾಂಸ ಸಾಗಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಚೆಕ್‌ಪೋಸ್ಟ್‌ಗಳಿಗೆ ಇಲಾಖೆಯ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಅವರು ಎಎಸ್‌ಎಫ್ ಹರಡುವುದನ್ನು ತಡೆಯಲು ನಿಗಾ ವಹಿಸುತ್ತಾರೆ ಎಂದು ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಡಿಡಿ ಡಾ.ಸುರೇಶ್ ಭಟ್ ತಿಳಿಸಿದ್ದಾರೆ.

ಯಾವುದೇ ಹಂದಿಗಳು ವೈರಸ್ ಸೋಂಕಿಗೆ ಒಳಗಾಗಿದ್ದರೆ ಇಲಾಖೆಗೆ ತಕ್ಷಣ ವರದಿ ಮಾಡುವಂತೆ ಜಿಲ್ಲೆಯ ಹಂದಿ ಸಾಕಾಣಿಕೆದಾರರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಎಎಫ್‌ಎಸ್ ಹಂದಿಗಳಿಂದ ಮನುಷ್ಯರಿಗೆ ಹರಡುವುದಿಲ್ಲ ಮತ್ತು ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಡಾ.ಸುರೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!