ಮೋಹನದಾಸ್ ಪೈ 
ರಾಜ್ಯ

‘ಉದಯವಾಣಿ’ ಸಂಸ್ಥಾಪಕ ಟಿ.ಮೋಹನದಾಸ್ ಪೈ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಉದಯವಾಣಿ ದಿನಪತ್ರಿಕೆ ಸಂಸ್ಥಾಪಕ ತೋನ್ಸೆ ಮೋಹನದಾಸ್ ಪೈ(89) ಅವರು ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಣಿಪಾಲ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಉದಯವಾಣಿ ದಿನಪತ್ರಿಕೆ ಸಂಸ್ಥಾಪಕ ತೋನ್ಸೆ ಮೋಹನದಾಸ್ ಪೈ(89) ಅವರು ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಟಿ.ಮೋಹನದಾಸ್ ಪೈ ಅವರು ಸಹೋದರರಾದ ಡಾ ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ಸಹೋದರಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ ಅವರನ್ನು ಅಗಲಿದ್ದಾರೆ.

ನಾಳೆ ಎಂಜಿಎಂ ಕಾಲೇಜಿನಲ್ಲಿ  ಮೋಹನದಾಸ್ ಪೈ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೋಹನ್ ದಾಸ್ ಎಂ ಪೈ  ಅವರು ಡಾ ಟಿ ಎಂ ಎ ಪೈ ಫೌಂಡೇಶನ್ ಹಾಗೂ ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು. ಮೋಹನ್ ದಾಸ್ ಎಂ  ಪೈ ನಿಧನ ಹಿನ್ನೆಲೆಯಲ್ಲಿ ನಾಳೆ ಡಾ ಟಿ ಎಂ ಎ ಪೈ ಫೌಂಡೇಶನ್ ನ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

1933ರ ಜೂ. 20ರಂದು ಜನಿಸಿದ ಮೋಹನದಾಸ್ ಪೈಯವರು ಡಾಟಿಎಂಎ ಪೈಯವರ ಹಿರಿಯ ಪುತ್ರ. ಇವರಿಗೆ ಮೂರು ವರ್ಷ ಆಗಿರುವಾಗ ತಂದೆಯವರು ಉಡುಪಿಯಿಂದ ಮಣಿಪಾಲಕ್ಕೆ ಸ್ಥಳಾಂತರವಾದ ಕಾರಣ ಇವರೂ ಮಣಿಪಾಲದಲ್ಲಿ ಬೆಳೆದರು. ತಂದೆಯವರು ಆರಂಭಿಸಿದ ಹೊಸ ಶಾಲೆಯಲ್ಲಿ(ಮಣಿಪಾಲ ಅಕಾಡೆಮಿ ಶಾಲೆ), ಉಡುಪಿಯ ಮೋಡರ್ನ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಬಳಿಕ ತಂದೆಯವರು ನೂತನವಾಗಿ ಆರಂಭಿಸಿದ ಎಂಜಿಎಂ ಕಾಲೇಜಿನಲ್ಲಿ (1949-51) ಇಂಟರ್‌ಮೀಡಿಯೆಟ್ ಶಿಕ್ಷಣ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT