ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ತುಮಕೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

21 ವರ್ಷದ ಕವಿತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದು, ಕವಿತಾ ತುಮಕೂರು ನಗರದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತಾ, ಕಾಲೇಜು ಹಾಸ್ಟೆಲ್ ನ ಸಂಗಮಿತ್ರ ಬ್ಲಾಕ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದ್ದು, ರಾತ್ರಿ ಸುಮಾರು 12.30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೈಸೂರು ಮೂಲದವರಾಗಿರುವ ಕವಿತಾ ಪೋಷಕರಿಗೆ ಸಾವಿನ ವಿಷಯ ತಿಳಿಸಲಾಗಿದೆ. ತಿಲಕ್‌ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕವಿತಾ ಆತ್ಮಹತ್ಯೆಹೆ ನಿಖರ ಕಾರಣ ತಿಳಿದು ಬಂದಿಲ್ಲ. ಕವಿತಾ ಮೃತದೇಹವನ್ನು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ರವಾನಿಸಲಾಗಿದೆ.

ಕವಿತಾ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಫೊಲೀಸರು ಭೇಟಿ ನೀಡಿದ್ದು, ಆತ್ಮಹತ್ಯೆ ಸಂಭವಿಸಿದ ಕೊಠಡಿಯಲ್ಲಿ ಡೆತ್ ನೋಟ್ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕವಿತಾ ಗೆಳತಿಯರು ಮತ್ತು ಹಾಸ್ಟೆಲ್ ಸಿಬ್ಬಂದಿಯಿಂದಲೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT