ನಟಿ ಅನುಷ್ಕಾ ಶೆಟ್ಟಿ, ಗುಣರಂಜನ್ ಶೆಟ್ಟಿ 
ರಾಜ್ಯ

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು, ಗೃಹ ಸಚಿವರಿಗೆ ದೂರು

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ  ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ  ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಇನ್ನೊಂದೆಡೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿಗೆ ಮನ್ಮಿತ್ ರೈನಿಂದ ಜೀವ ಬೆದರಿಕೆಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತವಲಯದಲ್ಲಿಯೇ ಗುರುತಿಸಿಕೊಂಡಿದ್ದ ಗುಣರಂಜನ್ ಶೆಟ್ಟಿ ಹಾಗೂ ಮನ್ಮಿತ್ ರೈ ನಡುವೆ ಗಲಾಟೆಯಾಗಿದೆ ಎನ್ನಲಾಗುತ್ತಿದೆ.

ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚಿನ ವದಂತಿ ಬೆನ್ನಲ್ಲೇ ಬಂಟ್ವಾಳದ ಮುತ್ತಪ್ಪ ರೈ ಆಪ್ತ ರಾಕೇಶ್ ಮಲ್ಲಿಯನ್ನು ಮಂಗಳೂರು ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ರಾಕೇಶ್ ಮಲ್ಲಿ ಹಾಗೂ ಮನ್ಮಿತ್ ಆಪ್ತರಾಗಿದ್ದಾರೆ. ಇದೇ ವಿಚಾರಕ್ಕೆ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮುತ್ತಪ್ಪ ರೈ ಬದುಕಿದ್ದಾಗ ಅನ್ಯೋನ್ಯವಾಗಿದ್ದ ರಾಕೇಶ್ ಮಲ್ಲಿ, ಮನ್ಮಿತ್ ಹಾಗೂ ಗುಣರಂಜನ್ ಶೆಟ್ಟಿ ರೈ ಸಾವಿನ ನಂತರ ದೂರವಾಗಿದ್ದರು. ಗುಣರಂಜನ್ ಶೆಟ್ಟಿ ಜಯ ಕರ್ನಾಟಕ ಸಂಘಟನೆಯಿಂದ ಹೊರಬಂದು ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪಿಸಿದ್ದರು. ಅಲ್ಲದೇ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇದೇ ಕಾರಣಕ್ಕೆ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ಆದರೆ, ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ಮನ್ಮಿತ್ ರೈ, ತಾನು ವಿದೇಶದಲ್ಲಿರುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಹೇಳಿಕೆಗಳನ್ನು ಪೊಲೀಸರು ಗಮನಿಸುತ್ತಿದ್ದು, ತನಿಖೆಯಿಂದ ಮಾತ್ರ ಸತ್ಯಾಂಶ ತಿಳಿದುಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT