ರಾಜ್ಯ

ಬಿಹಾರ: ಕಿಶನ್ ಗಂಜ್ ನಲ್ಲಿ ಚಿಕ್ಕಮಗಳೂರಿನ ಯೋಧ ಗಣೇಶ್ ಸಾವು!

Vishwanath S

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮಸಿಗದ್ದೆ ನಿವಾಸಿ ಯೋಧ ಗಣೇಶ್ ಅವರು ಬಿಹಾರದ ಕಿಶನ್ ಗಂಜ್ ಪ್ರದೇಶದಲ್ಲಿ ಮೃತಪಟ್ಟಿದ್ದಾರೆ. 

ರಜೆಯಲ್ಲಿ ಗ್ರಾಮಕ್ಕೆ ಬಂದಿದ್ದ ಯೋಧ ಗಣೇಶ್ ಅವರು ಜೂನ್ 9ರಂದು ಕರ್ತವ್ಯಕ್ಕೆ ಹಾಜರಾಗಲು ಬಿಹಾರದ ಕಿಶನ್ ಗಂಜ್ ಗೆ ತೆರಳಿದ್ದು ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಯೋಧ ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ. 

ಇನ್ನೆರಡು ದಿನಗಳಲ್ಲಿ ಗಣೇಶ್ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT