ಬಿಎಸ್ ಪಾಟೀಲ್ 
ರಾಜ್ಯ

ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್‌ ನೇಮಕ

ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಬಿಎಸ್ ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಇಂದು ಅಂಕಿತ ಹಾಕಿದ್ದಾರೆ. ಬಿಎಸ್ ಪಾಟೀಲ್‌ ಅವರು ನಾಳೆ ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಈಗ ಬಿ.ಎಸ್‌. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.  ಬಿಎಸ್ ಪಾಟೀಲ್ ಅವರು 2019ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್‌. ಪಾಟೀಲ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel