ಬಿಎಸ್ ಪಾಟೀಲ್ 
ರಾಜ್ಯ

ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್‌ ನೇಮಕ

ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಬಿಎಸ್ ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಇಂದು ಅಂಕಿತ ಹಾಕಿದ್ದಾರೆ. ಬಿಎಸ್ ಪಾಟೀಲ್‌ ಅವರು ನಾಳೆ ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಈಗ ಬಿ.ಎಸ್‌. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.  ಬಿಎಸ್ ಪಾಟೀಲ್ ಅವರು 2019ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್‌. ಪಾಟೀಲ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

EC ಬೇಜವಾಬ್ದಾರಿ ಸಂಸ್ಧೆ: ಸ್ವತಂತ್ರ ಸಂಸ್ಥೆಗಳನ್ನು ಪ್ರಧಾನಿ ಮೋದಿ ನಾಶಪಡಿಸಿದ್ದಾರೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು ಕಾರಾಗೃಹವೋ ಐಷಾರಾಮಿ ಕೇಂದ್ರವೋ?: ವಿಕೃತಕಾಮಿ ಉಮೇಶ್ ರೆಡ್ಡಿ, ISIS ಉಗ್ರನಿಗೆ ಟಿವಿ, ಮೊಬೈಲ್ ರಾಜಾತಿಥ್ಯ!

'ಚಪ್ಪಲಿ ತೋರಿಸಿ ಕಲಾವಿದರಿಗೆ ಅಪಮಾನ'.. ರಕ್ಷಿತಾ ವಿರುದ್ಧ ಅಶ್ವಿನಿಗೌಡ ಆರೋಪ, ಕಿಚ್ಚಾ ಸುದೀಪ್ ವಿಡಿಯೋ ಸಹಿತ ತಿರುಗೇಟು! Video

Cricket: ಮಳೆಯಿಂದ ರದ್ದಾದ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ! ಕೊಹ್ಲಿ ದಾಖಲೆ ಜಸ್ಟ್ ಮಿಸ್!

Parliament Winter Session: ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

SCROLL FOR NEXT