ಸಂಗ್ರಹ ಚಿತ್ರ 
ರಾಜ್ಯ

ರಸ್ತೆ ಗುಂಡಿಗಳ ಸ್ಥಿತಿಗತಿ ಕುರಿತು 2 ದಿನಗಳಲ್ಲಿ ಹೈಕೋರ್ಟ್'ಗೆ ವರದಿ ಸಲ್ಲಿಕೆ: ಬಿಬಿಎಂಪಿ

ರಸ್ತೆ ಗುಂಡಿಗಳ ಸ್ಥಿತಿಗತಿಗಳ ಕುರಿತು ಎರಡು ದಿನಗಳಲ್ಲಿ ಹೈಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ರವೀಂದ್ರ ಪಿಎನ್ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ರಸ್ತೆ ಗುಂಡಿಗಳ ಸ್ಥಿತಿಗತಿಗಳ ಕುರಿತು ಎರಡು ದಿನಗಳಲ್ಲಿ ಹೈಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ರವೀಂದ್ರ ಪಿಎನ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿಯವರೆಗೆ 13,400 ಕ್ಕೂ ಹೆಚ್ಚು ಗುಂಡಿಗಳನ್ನು ಪತ್ತೆಯಾಗಿದ್ದು, ಭರ್ತಿ ಕಾಮಗಾರಿ ನಡೆಯುತ್ತಿದೆ. ಈ ಪೈಕಿ ಇನ್ನೂ 1,500 ಗುಂಡಿ ಮುಚ್ಚುವುದು ಬಾಕಿ ಉಳಿದಿವೆ. ಪ್ರತಿದಿನ ಹೊಸದಾಗಿ ಗುಂಡಿಗಳು ಪತ್ತೆಯಾಗುತ್ತಿದ್ದು, ಗುಂಡಿ ಮುಚ್ಚುವ ಕಾರ್ಯ ನಿರಂತರವಾಗಿ ನಡಯುತ್ತಿದೆ. ರಸ್ತೆಗಳಲ್ಲಿ ಗುಂಡಿಗಳು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್'ಗೆ ನೋಟಿಸ್ ನೀಡಿ, ಅಮಾನತುಗೊಳಿಸಲಾಗುವುದು ಎಂದು ಹೇಳಿದರು.

ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚಬೇಕು. ಒಂದು ವೇಳೆ ವೈಜ್ಞಾನಿಕವಾಗಿ ಮುಚ್ಚದ ಗುಂಡಿಗಳು ಮತ್ತೆ ಸೃಷ್ಟಿಯಾದರೆ ಅಂತಹ ಗುತ್ತಿಗೆದಾರರಿಗೆ ಬಿಲ್ ಪಾವತಿಸುವುದಿಲ್ಲ. ಜೊತೆಗೆ ಗುಂಡಿಗಳನ್ನು ಮತ್ತೊಮ್ಮೆ ಮುಚ್ಚುವ ವೆಚ್ಚವನ್ನು ಗುತ್ತಿಗೆದಾರರೇ ಭರಿಸಬೇಕು ಎಂದು ತಿಳಿಸಿದರು.

ಪೈಥಾನ್ ಯಂತ್ರದಿಂದ ಗುಂಡಿ ಮುಚ್ಚುವ ವಿಚಾರದಲ್ಲಿ ಗುತ್ತಿಗೆದಾರರ ಮೇಲೆ ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಹಲ್ಲೆ ಮಾಡಿದ್ದಾರೆಂಬ ಆರೋಪ ಕುರಿತಂತೆ ಇನ್ನೆರಡು ದಿನಗಳಲ್ಲಿ ಮುಖ್ಯ ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು. ಈಗಾಗಲೇ ಎಲ್ಲಾ ವಿಚಾರಣೆ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT