ಸಂಗೀತ ನಿರ್ದೇಶಕ ಹಂಸಲೇಖ(ಸಂಗ್ರಹ ಚಿತ್ರ) 
ರಾಜ್ಯ

'ಅಂದು ಗೋಕಾಕ್ ಚಳವಳಿ, ಇಂದು ಕುಪ್ಪಳ್ಳಿ ಕಹಳೆ': ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಗುಡುಗು

ರಾಜ್ಯ ಸರ್ಕಾರದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕುವೆಂಪು ಹುಟ್ಟೂರು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು ಸಂಗೀತ ನಿರ್ದೇಶಕ ಹಂಸಲೇಖ ಭಾಗಿಯಾಗಿ ಚಾಲನೆ ನೀಡಿದರು. 

ಕುಪ್ಪಳ್ಳಿ (ತೀರ್ಥಹಳ್ಳಿ): ರಾಜ್ಯ ಸರ್ಕಾರದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕುವೆಂಪು ಹುಟ್ಟೂರು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು ಸಂಗೀತ ನಿರ್ದೇಶಕ ಹಂಸಲೇಖ ಭಾಗಿಯಾಗಿ ಚಾಲನೆ ನೀಡಿದರು. 

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ ನಡೆದಿದ್ದು. ಸಾಹಿತಿಗಳು ಹಾಗೂ ವಿದ್ವಾಂಸರು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ನಮಗೆ ಕನ್ನಡಕ್ಕೆ ಮಹಾಮನೆ ಕಲ್ಯಾಣದಲ್ಲಿ. ಕವಿಶೈಲದಲ್ಲಿ ಗುರುಮನೆ, ಈ ಗುರುಮನೆಯಿಂದ ಇವತ್ತು ನಾವು ಕಹಳೆಯನ್ನು ಊದುತ್ತಿದ್ದೇವೆ. ಅದು ಕುಪ್ಪಳ್ಳಿ ಕಹಳೆ. ಅವತ್ತು ಗೋಕಾಕ್ ಚಳವಳಿ, ಇವತ್ತು ಕುಪ್ಪಳ್ಳಿ ಕಹಳೆ. ಇದು ನಾಡಿನಾದ್ಯಂತ ಮೊಳಗಬೇಕು ಎಂದರು.

ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವು ಇಲ್ಲಿ ಇದ್ದು ಏನು ಮಾಡುವುದು, ಬಸವ, ಕುವೆಂಪು ಅಂದರೆ ಕರುನಾಡು, ಕನ್ನಡ, ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರಿಗೆ ಅವಮಾನವಾದ ಮೇಲೆ ನಾವು ಇಲ್ಲಿ ಇದ್ದು ಏನು ಮಾಡುವುದು, ನಮ್ಮ ನಾಡೇ ಒಂದು ಗೀತೆ, ನಮ್ಮ ನಾಡೇ ಧ್ವಜ, ಎರಡಕ್ಕೂ ಅವಮಾನವಾಗಿದೆ. ಕನ್ನಡದ ನಡ ಮುರಿಯುವ ನಡೆ ಕನ್ನಡನಾಡಿನಲ್ಲಿ ಶುರುವಾಗಿದೆ. ಇದಕ್ಕೆ ನಾವು ಹೋರಾಡುತ್ತೇವೆ, ನಾವು ಭಾಷಾಂಧರು ಅಂದರೂ ಸರಿ, ತಮಿಳು ನಾಡಿನಲ್ಲಿ ಅವರ ಭಾಷೆಗೆ ಕುತ್ತು ಬಂದಾಗ ಆಡಳಿತ ಪಕ್ಷ ವಿರೋಧ ಪಕ್ಷದವರೆಲ್ಲರೂ ಒಟ್ಟಾಗುತ್ತಾರೆ, ಅವರನ್ನು ನೋಡಿ ನಾವು ಕನ್ನಡಿಗರು ಕಲಿಯಬೇಕು ಎಂದರು.

ನಾವು ಯಾವುದೇ ಪಕ್ಷ ಅಲ್ಲ, ಕವಿ ಪಕ್ಷ, ಕನ್ನಡದ ಕುಪ್ಪಳ್ಳಿ ಕಹಳೆಯನ್ನು ಊದಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT