ಸಂಗೀತ ನಿರ್ದೇಶಕ ಹಂಸಲೇಖ(ಸಂಗ್ರಹ ಚಿತ್ರ) 
ರಾಜ್ಯ

'ಅಂದು ಗೋಕಾಕ್ ಚಳವಳಿ, ಇಂದು ಕುಪ್ಪಳ್ಳಿ ಕಹಳೆ': ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಗುಡುಗು

ರಾಜ್ಯ ಸರ್ಕಾರದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕುವೆಂಪು ಹುಟ್ಟೂರು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು ಸಂಗೀತ ನಿರ್ದೇಶಕ ಹಂಸಲೇಖ ಭಾಗಿಯಾಗಿ ಚಾಲನೆ ನೀಡಿದರು. 

ಕುಪ್ಪಳ್ಳಿ (ತೀರ್ಥಹಳ್ಳಿ): ರಾಜ್ಯ ಸರ್ಕಾರದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕುವೆಂಪು ಹುಟ್ಟೂರು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು ಸಂಗೀತ ನಿರ್ದೇಶಕ ಹಂಸಲೇಖ ಭಾಗಿಯಾಗಿ ಚಾಲನೆ ನೀಡಿದರು. 

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ ನಡೆದಿದ್ದು. ಸಾಹಿತಿಗಳು ಹಾಗೂ ವಿದ್ವಾಂಸರು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ನಮಗೆ ಕನ್ನಡಕ್ಕೆ ಮಹಾಮನೆ ಕಲ್ಯಾಣದಲ್ಲಿ. ಕವಿಶೈಲದಲ್ಲಿ ಗುರುಮನೆ, ಈ ಗುರುಮನೆಯಿಂದ ಇವತ್ತು ನಾವು ಕಹಳೆಯನ್ನು ಊದುತ್ತಿದ್ದೇವೆ. ಅದು ಕುಪ್ಪಳ್ಳಿ ಕಹಳೆ. ಅವತ್ತು ಗೋಕಾಕ್ ಚಳವಳಿ, ಇವತ್ತು ಕುಪ್ಪಳ್ಳಿ ಕಹಳೆ. ಇದು ನಾಡಿನಾದ್ಯಂತ ಮೊಳಗಬೇಕು ಎಂದರು.

ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವು ಇಲ್ಲಿ ಇದ್ದು ಏನು ಮಾಡುವುದು, ಬಸವ, ಕುವೆಂಪು ಅಂದರೆ ಕರುನಾಡು, ಕನ್ನಡ, ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರಿಗೆ ಅವಮಾನವಾದ ಮೇಲೆ ನಾವು ಇಲ್ಲಿ ಇದ್ದು ಏನು ಮಾಡುವುದು, ನಮ್ಮ ನಾಡೇ ಒಂದು ಗೀತೆ, ನಮ್ಮ ನಾಡೇ ಧ್ವಜ, ಎರಡಕ್ಕೂ ಅವಮಾನವಾಗಿದೆ. ಕನ್ನಡದ ನಡ ಮುರಿಯುವ ನಡೆ ಕನ್ನಡನಾಡಿನಲ್ಲಿ ಶುರುವಾಗಿದೆ. ಇದಕ್ಕೆ ನಾವು ಹೋರಾಡುತ್ತೇವೆ, ನಾವು ಭಾಷಾಂಧರು ಅಂದರೂ ಸರಿ, ತಮಿಳು ನಾಡಿನಲ್ಲಿ ಅವರ ಭಾಷೆಗೆ ಕುತ್ತು ಬಂದಾಗ ಆಡಳಿತ ಪಕ್ಷ ವಿರೋಧ ಪಕ್ಷದವರೆಲ್ಲರೂ ಒಟ್ಟಾಗುತ್ತಾರೆ, ಅವರನ್ನು ನೋಡಿ ನಾವು ಕನ್ನಡಿಗರು ಕಲಿಯಬೇಕು ಎಂದರು.

ನಾವು ಯಾವುದೇ ಪಕ್ಷ ಅಲ್ಲ, ಕವಿ ಪಕ್ಷ, ಕನ್ನಡದ ಕುಪ್ಪಳ್ಳಿ ಕಹಳೆಯನ್ನು ಊದಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP protest: ಪ್ರತಿಭಟನೆಗೆ ಅಡ್ಡಿಪಡಿಸಲು, ಕಲ್ಲು ತೂರಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ; ಕೇಂದ್ರದ ವಿರುದ್ಧ ದೀಪ್ಕೆ ಕಿಡಿ

Video: ಐಷಾರಾಮಿ ಕ್ಯಾರಾವ್ಯಾನ್ ಬೆನ್ನಲ್ಲೇ ದುಬಾರಿ ಬೆಲೆಯ ಕಾರು ಖರೀದಿಸಿದ ಕಿಚ್ಚ ಸುದೀಪ್! ಬೆಲೆ ಎಷ್ಟು ಗೊತ್ತಾ?

'ಯುವಕರ ಭವಿಷ್ಯಕ್ಕಿಂತ ಮುಖ್ಯ ಯಾವುದೂ ಅಲ್ಲ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ತ್ವರಿತ ನ್ಯಾಯಾಲಯ ಸ್ಥಾಪನೆ': PM ನರೇಂದ್ರ ಮೋದಿ

ಅಮೆರಿಕ ಬೆದರಿಕೆಗೆ Iran ತಿರುಗೇಟು: 'ಕಣ್ಣಿಗೆ ಕಣ್ಣು' ಉತ್ತರ, ಮೂಲಸೌಕರ್ಯಗಳ ಮೇಲೆ ದಾಳಿಯಾದರೆ ಪ್ರಬಲ ಪ್ರತೀಕಾರ ಎಂದ ಟೆಹ್ರಾನ್

'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ': ನಮ್ಮತ್ತ ಬೆರಳು ತೋರಿಸುವ ಮೊದಲು ನಿಮ್ಮ ದೇಶ ನೋಡಿಕೊಳ್ಳಿ; ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗು..!