ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ 
ರಾಜ್ಯ

ನೂತನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ

ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಇದಕ್ಕೂ ಮೊದಲು ಬಿಎಸ್ ಪಾಟೀಲ್ ಅವರು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ ಮಾಡಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.

ಲೋಕಾಯುಕ್ತರಾಗಿದ್ದ ನ್ಯಾಯಾಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಖಾಲಿ ಇದ್ದ ಹುದ್ದೆಗೆ 2019ರ ನವೆಂಬರ್ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಬಿ.ಎಸ್. ಪಾಟೀಲ್. ಅವರನ್ನು ನೂತನ ಲೋಕಾಯುಕ್ತರಾಗಿ ನೇಮಕ ಮಾಡಲಾಗಿದೆ

ಸಿದ್ದರಾಮಯ್ಯ ಶುಭಾಶಯ:
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR, ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ'.. ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI!