ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ 
ರಾಜ್ಯ

ನೂತನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ

ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಇದಕ್ಕೂ ಮೊದಲು ಬಿಎಸ್ ಪಾಟೀಲ್ ಅವರು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ ಮಾಡಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.

ಲೋಕಾಯುಕ್ತರಾಗಿದ್ದ ನ್ಯಾಯಾಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಖಾಲಿ ಇದ್ದ ಹುದ್ದೆಗೆ 2019ರ ನವೆಂಬರ್ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಬಿ.ಎಸ್. ಪಾಟೀಲ್. ಅವರನ್ನು ನೂತನ ಲೋಕಾಯುಕ್ತರಾಗಿ ನೇಮಕ ಮಾಡಲಾಗಿದೆ

ಸಿದ್ದರಾಮಯ್ಯ ಶುಭಾಶಯ:
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT