ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ತೇಲಿಬಂದ ಮಹಿಳೆ ಶವ 
ರಾಜ್ಯ

ದಾಬಸ್ ಪೇಟೆ: ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ತೇಲಿಬಂದ ಮಹಿಳೆ ಶವ

ನಗರದ ಹೊರ ವಲಯದ ದಾಬಸ್ ಪೇಟೆಯ ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆ ಶವ ತೇಲಿ ಬಂದಿದ್ದು, ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ನೆಲಮಂಗಲ: ನಗರದ ಹೊರ ವಲಯದ ದಾಬಸ್ ಪೇಟೆಯ ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆ ಶವ ತೇಲಿ ಬಂದಿದ್ದು, ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಹೊನ್ನೇನಹಳ್ಳಿ ಗ್ರಾಮದ ಗ್ರಾಮ ಪಂಚಯತಿಯ ಕೆಂಗಲ್ ಗ್ರಾಮದ ಅಗಳಿ ಕಟ್ಟೆಯ ಸಣ್ಣಕೆರೆಯಲ್ಲಿ ತೇಲಿಬಂದ ಸೂಟ್‍ಕೇಸ್‍ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯರು ಕೊಳೆತ ವಾಸನೆ ಹಾಗೂ ಅನುಮಾನಾಸ್ಪದ ಸೂಟ್‍ಕೇಸ್‍ ತೇಲುತ್ತಿರುವುನ್ನು ಗಮನಿಸಿ ದಾಬಸ್ ಪೇಟೆ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ದಾಬಸ್ ಪೇಟೆ ಪೋಲೀಸರು ಸೂಟ್‍ಕೇಸ್ ವಶಕ್ಕೆ ಪಡೆದು ತೆರೆದು ನೋಡಿದಾಗ ಅಲ್ಲಿ ಸುಮಾರು 30 ರಿಂದ 35 ವರ್ಷದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಮಹಿಳೆಯನ್ನು ಬೇರೆಡೆ ಕೊಲೆಗೈದು ತಂದು ಎಸೆದಿರುವ ಶಂಕೆಯಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನವಂಶಿ ಕೃಷ್ಣ, ನೆಲಮಂಗಲ ವೃತ್ತ ನಿರೀಕ್ಷಕ ರಾಜೀವ್, ದಾಬಸ್ ಪೇಟೆ ಠಾಣೆ ಆರಕ್ಷಕ ಉಪನಿರೀಕ್ಷಕ ಎಂ.ಎನ್.ಮುರಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಸಕ್ಕೆ ಎಸೆದಿದ್ದ ಲಾಟರಿ ಟಿಕೆಟ್ ಗೆ ಬಂಪರ್ ಬಹುಮಾನ! ಕೊನೆಗೂ ಹುಡುಕಾಡಿ ಬರೋಬ್ಬರಿ 10.9 ಕೋಟಿ ರೂ ಗೆದ್ದ ಮಹಿಳೆ!

UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!