ಶಾಂತಿನಗರದಲ್ಲಿ ಜಲಮಾರ್ಗ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ. 
ರಾಜ್ಯ

ಉಪನಗರ ರೈಲು, ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಯಿಂದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ: ಸಿಎಂ ಬೊಮ್ಮಾಯಿ ವಿಶ್ವಾಸ

ರೂ.15 ಸಾವಿರ ಕೋಟಿ ವೆಚ್ಚದ ಉಪನಗರ ರೈಲು ಹಾಗೂ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ಇದೇ 20 ರಂದು ಪ್ರಧಾನಮಂದ್ರಿ ನರೇಂದ್ರ ಮೋದಿಯವರು ಅಡಿಗಲ್ಲು ಹಾಕಲಿದ್ದು, ಈ ಎರಡು ಯೋಜನೆಗಳು ಪೂರ್ಣಗೊಂಡರೆ...

ಬೆಂಗಳೂರು: ರೂ.15 ಸಾವಿರ ಕೋಟಿ ವೆಚ್ಚದ ಉಪನಗರ ರೈಲು ಹಾಗೂ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ಇದೇ 20 ರಂದು ಪ್ರಧಾನಮಂದ್ರಿ ನರೇಂದ್ರ ಮೋದಿಯವರು ಅಡಿಗಲ್ಲು ಹಾಕಲಿದ್ದು, ಈ ಎರಡು ಯೋಜನೆಗಳು ಪೂರ್ಣಗೊಂಡರೆ ನಗರದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಮುಂದಿನ ವಾರ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ರೂ.15 ಸಾವಿರ ಕೋಟಿ ವೆಚ್ಚದ ಉಪನಗರ ರೈಲು ಹಾಗೂ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು ಹೇಳಿದರು.

ನಮ್ಮ ಸರ್ಕಾರ ಆರೋಗ್ಯ ಮೂಲಸೌಕರ್ಯ, ಶಿಕ್ಷಣ ಮತ್ತು ಬೆಂಗಳೂರು ನಗರದ ಸೌಂದರ್ಯೀಕರಣಕ್ಕೆ ಹೆಚ್ಚಿನ ಗಮನ ನೀಡುತ್ತಿದೆ. ನಗರದ ರಸ್ತೆಗಳಿಗೆ ಪ್ರತಿನಿತ್ಯ ಸುಮಾರು 500 ಹೊಸ ವಾಹನಗಳು ಸೇರ್ಪಡೆಗೊಳ್ಳುತ್ತಿವೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ನಗರಕ್ಕೆ ಉತ್ತಮ ಸಂಪರ್ಕದ ಅಗತ್ಯವಿದ್ದು, ನಮ್ಮ ಸರ್ಕಾರ ರೂ.15 ಸಾವಿರ ಕೋಟಿಗಳ ಉಪನಗರ ರೈಲು ಯೋಜನೆಗೆ ಅನುಮತಿ ನೀಡಿದೆ. ಮುಂದಿನ ವಾರ ಈ ಯೋಜನೆಗೆ ಪ್ರಧಾನಿ ಮೋದಿಯವರು ಅಡಿಗಲ್ಲು ಹಾಕಲಿದ್ದಾರೆಂದು ತಿಳಿಸಿದರು.

ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಸರಕಾರ ಬದ್ಧವಾಗಿದ್ದು, ಶೀಘ್ರವೇ ಟೆಂಡರ್‌ ಕರೆಯಲಾಗುವುದು ಎಂದರು. ಇದೇ ವೇಳೆ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಅನುಷ್ಠಾನಗೊಳಿಸಿರುವ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಇದೇ ವೇಳೆ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ ಮುಂಭಾಗ ನಡೆಯುತ್ತಿರುವ ಜಲಮಾರ್ಗ ನಿರ್ಮಾಣ ಕಾಮಗಾರಿಯನ್ನೂ ಮುಖ್ಯಮಂತ್ರಿಗಳು ನಿನ್ನೆ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು. ಎನ್.ಆರ್.ರಸ್ತೆಯಿಂದ ಬೆಳ್ಳಂದೂರು ಕೆರೆವರೆಗೆ 9.60 ಕಿಮೀ ರಾಜಕಾಲುವೆಯನ್ನು ರೂ.169 ಕೋಟಿ ವೆಚ್ಚದಲ್ಲಿ ಜಲ ಮಾರ್ಗವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೇ ಶೇ.60ಕ್ಕೂ ಅಧಿಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿಯಿರುವ ಎಲ್ಲಾ ಕಾಮಗಾರಿಯನ್ನು ಪೂರ್ಣಗೊಳಿಸಿ ಶೀಘ್ರ ಲೋಕಾರ್ಪಣೆ ಮಾಡಲಾಗುತ್ತದೆ, ಕಾಮಗಾರಿಗೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದಲೇ ಲೋಕಾರ್ಪಣೆಗೊಳಿಸಲಾಗುವುದು ಎಂದರು.

ನಾಗರಿಕ ಜಲಮಾರ್ಗದಲ್ಲಿ ಜನರು ಕುಳಿತುಕೊಳ್ಳಲು, ವಾಯುವಿಹಾರ ಮಾಡುವುದು ಸೇರಿದಂತೆ ಸಂಚಾರಕ್ಕೆ ಕಿರು ಸೇತುವೆ ಹಾಗೂ ಸುತ್ತಲಿನ ಸ್ಥಳಗಳ ಅಭಿವೃದ್ಧಿ ಮಾಡಲಾಗುತ್ತದೆಯ ಯೋಜನೆಯಿಂದ ಕೆ.ಆರ್.ಮಾರುಕಟ್ಟೆ, ಸುಧಾಮನಗರ, ಕೆ.ಹೆಚ್.ರಸ್ತೆ, ಜೆ.ಕೆ.ಪುರ, ಎಲ್.ಆರ್.ನಗರ, ಕೋರಮಂಗಲ ಮತ್ತು ಎಸ್'ಟಿ.ಬೆಡ್ ಪ್ರದೇಶಗಳ ನಿವಾಸಿಗಳಿಗೆ ಉತ್ತಮ ಪರಿಸರ, ಆಸ್ತಿಗೆ ಮೌಲ್ಯವೃದ್ಧಿ ಮಾಡಿದಂತಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!