ಪ್ರತಿಭಟನೆಯನ್ನುದ್ದೇಶಿ ಮಾತನಾಡುತ್ತಿರುವ ಡಿಕೆ.ಶಿವಕುಮಾರ್ 
ರಾಜ್ಯ

ರಾಹುಲ್ ಗಾಂಧಿ ಇಡಿ ವಿಚಾರಣೆಗೆ ವಿರೋಧ: ಕಾಂಗ್ರೆಸ್ ರಾಜಭವನ ಚಲೋ ಆರಂಭ, ಜನತೆಗೆ ಟ್ರಾಫಿಕ್ ಜಾಮ್ ಬಿಸಿ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದಾರೆ.

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ.

ಬೆಳಿಗ್ಗೆ 11.15ರ ವೇಳೆಗೆ ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ನಾಯಕರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರು ರಾಜ್ ಭವನ್ ಚಲೋ ರ್ಯಾಲಿ ಆರಂಭಿಸಿದ್ದಾರೆ.

ರ್ಯಾಲಿಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದರು ಮತ್ತು ಶಾಸಕರು ಸೇರಿದಂತೆ ಪಕ್ಷದ ಹಲವು ಮುಖಂಡರು ಭಾಗಿಯಾಗಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕ್ವೀನ್ಸ್‌‌ ರೋಡ್‌- ಇಂಡಿಯನ್ ಎಕ್ಸ್‌ ಪ್ರೆಸ್, ಜಿಪಿಓ‌ ಸಿಗ್ನಲ್, ಕ್ವೀನ್ಸ್ ರೋಡ್, ಇಂಡಿಯನ್ ಎಕ್ಸ್ ಪ್ರೆಸ್, ವಸಂತ‌ನಗರ, ಶಿವಾಜಿನಗರ, ಕೋಲ್ಸ್‌ಪಾರ್ಕ್‌, ನಂದಿ‌ದುರ್ಗ ‌ರಸ್ತೆ, ವಿಧಾನಸೌಧ, ಕೆ ಆರ್ ಸರ್ಕಲ್‌‌ ಸೇರಿದಂತೆ‌ ಬೆಂಗಳೂರಿನ ಹೃದಯ ಭಾಗದಲ್ಲಿ‌ ಸಂಚಾರ ದಟ್ಟಣೆ ಎದುರಾಗಿದೆ ಎಂದು ತಿಳಿದುಬಂದಿದೆ.

ರಾಜಭವನದ ಬಳಿ ಬಿಗಿ ಭದ್ರತೆ
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜಭವನದ ಎದುರು ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT