ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ನವ ವಿವಾಹಿತ ವೈದ್ಯ ಆತ್ಮಹತ್ಯೆ

ವೈದ್ಯರೊಬ್ಬರು ತಾವು ವಾಸವಾಗಿದ್ದ ಅಪಾರ್ಟ್‍ಮೆಂಟ್‍ನ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ವೈದ್ಯರೊಬ್ಬರು ತಾವು ವಾಸವಾಗಿದ್ದ ಅಪಾರ್ಟ್‍ಮೆಂಟ್‍ನ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿಕಾಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವರು. ಇವರು ಮೂಲತಃ ಆಂಧ್ರ ಪ್ರದೇಶದವರು. ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿಕಾಂತ್ ರೆಡ್ಡಿ ಅವರು ವೈದ್ಯೆಯನ್ನು ವಿವಾಹವಾಗಿದ್ದರು. ಅಮೃತಹಳ್ಳಿ ಮುಖ್ಯರಸ್ತೆ ಯಲ್ಲಿರುವ ಅಪಾರ್ಟ್‍ಮೆಂಟ್‍ನ 11ನೇ ಮಹಡಿಯ ಕಟ್ಟಡದಲ್ಲಿ ದಂಪತಿ ವಾಸಿಸುತ್ತಿದ್ದರು. ಮುಂಜಾನೆ 5 ಗಂಟೆ ಸುಮಾರಿನಲ್ಲಿ 11ನೇ ಮಹಡಿಯಿಂದ ಜಿಗಿದು ಪೃಥ್ವಿಕಾಂತ್ ರೆಡ್ಡಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಪತಿ, ಪತ್ನಿ ಇಬ್ಬರು ಅನ್ಯೋನ್ಯವಾಗಿಯೇ ಇದ್ದರು. ಆದರೆ ಕಳೆದ ಒಂದು ವಾರದಿಂದ ಪೃಥ್ವಿಕಾಂತ್ ರೆಡ್ಡಿ ಡಲ್ ಆಗಿದ್ದರು. ಪತ್ನಿ ಮಲಗಿದ್ದ ಸಂದರ್ಭವನ್ನು ನೋಡಿಕೊಂಡು ತಾನಿದ್ದ ಅಪಾರ್ಟ್‌ಮೆಂಟ್‌ನ 11 ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಪೊಲೀಸರು ತನಿಖಾ ಭಾಗವಾಗಿ ಆತನ ಮೊಬೈಲ್‌ ಅನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಬರೆದುಕೊಂಡಿದ್ದ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ತನಗೆ ಮದುವೆಗೆ ಮುಂಚೆಯೇ ಹೃದಯ ಸಂಬಂಧಿ ಕಾಯಿಲೆ ಇದೆ. ಆದರೆ ಈ ವಿಚಾರವನ್ನು ಮದುವೆಗೆ ಮುಂಚೆ ತನ್ನ ಪತ್ನಿಗೆ ತಿಳಿಸಿರಲಿಲ್ಲ. ತನ್ನ ಹೃದ್ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿರುವಾಗ ತಾನು ಬದುಕುವುದು ಮತ್ತು ಎಲ್ಲರಿಗೂ ಹೊರೆಯಾಗುವುದರಲ್ಲಿ ಅರ್ಥವಿಲ್ಲ ಎಂದು ಅವರು ಹೇಳಿದ್ದರು. ಯಾವುದೇ ಕೈಬರಹದ ಡೆತ್ ನೋಟ್ ಇಲ್ಲ, ಬದಲಿಗೆ ಆತ ಫೋನ್‌ನಿಂದ ಕಳುಹಿಸಲಾದ ವಾಟ್ಸಾಪ್ ಸಂದೇಶವಿದೆ” ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ಹೇಳಿದರು.

ಕಳೆದ ಐದು ದಿನಗಳಿಂದ ಅವರು ಆಸ್ಪತ್ರೆಗೆ ಹೋಗಿರಲಿಲ್ಲ ಎನ್ನಲಾಗಿದೆ. “ಪೃಥ್ವಿಕಾಂತ್ ರೆಡ್ಡಿ ಅವರು ನರವಿಜ್ಞಾನ ವಿಭಾಗದಲ್ಲಿ ಡಾಕ್ಟರೇಟ್ ಆಫ್ ಮೆಡಿಸಿನ್ ಓದುತ್ತಿದ್ದರು. ರೆಡ್ಡಿ ಉತ್ತಮ ವಿದ್ಯಾರ್ಥಿಯಾಗಿದ್ದರು ಮತ್ತು ಅವರ ಸ್ನೇಹಿತರು ಸೇರಿದಂತೆ ಯಾರಿಗೂ ಅವರ ಆರೋಗ್ಯದ ಬಗ್ಗೆ ಯಾವುದೇ ಸುಳಿವು ಇರಲಿಲ್ಲ. ಅವರು ತಮ್ಮ ಅನಾರೋಗ್ಯದ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಅವರ ಸಾವು ದುರದೃಷ್ಟಕರ ಎಂದು ಬಿಎಂಆರ್‌ಸಿಐ ನಿರ್ದೇಶಕ ಕಮ್ ಡೀನ್ ಡಾ.ರವಿ ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT