ಬಿಬಿಎಂಪಿ 
ರಾಜ್ಯ

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವುದು ನಕಲಿ ಡಿಲಿಮಿಟೇಶನ್ ಕರಡು: ಬಿಬಿಎಂಪಿ

ಕರಡನ್ನು ನೋಡಿದ ನಂತರ, ಅನೇಕ ನೆಟಿಜನ್‌ಗಳು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಪೋಸ್ಟ್ ಮಾಡಲು ಪ್ರಾರಂಭಿಸಿದ್ದಾರೆ, ಆದರೆ ಇದು ನಕಲಿ ಕರಡು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಡಿಲಿಮಿಟೇಶನ್‌ ಕಾರ್ಯ ಪೂರ್ಣಗೊಳ್ಳಲು ಸಮಯಾವಕಾಶವಿದೆ, ಕರಡನ್ನು ಸಾರ್ವಜನಿಕಗೊಳಿಸಬೇಕು ಎಂದು ನಾಗರಿಕರು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ 243 ವಾರ್ಡ್‌ಗಳ ವಿಂಗಡಣೆ ವರದಿಯ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕರಡನ್ನು ನೋಡಿದ ನಂತರ, ಅನೇಕ ನೆಟಿಜನ್‌ಗಳು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಪೋಸ್ಟ್ ಮಾಡಲು ಪ್ರಾರಂಭಿಸಿದ್ದಾರೆ, ಆದರೆ ಇದು ನಕಲಿ ಕರಡು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ತಾಂತ್ರಿಕ ದೋಷಗಳಿಂದ ಫೈಲ್‌ಗಳನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೆಲ ನಾಗರಿಕರು ಹೇಳಿದರೆ, ವಾರ್ಡ್ ಹೆಸರುಗಳು ಮತ್ತು ಮೀಸಲಾತಿ ಹೊಂದಿಕೆಯಾಗುತ್ತಿಲ್ಲ ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ವಿಭಜನಾ ವಿಧಾನಕ್ಕೆ ಸರ್ಕಾರ ಅನುಸರಿಸಿದ ಕ್ರಮವನ್ನು ಕೆಲವರು ಟೀಕಿಸಿದರೆ, ಇನ್ನು ಕೆಲವರು 243 ವಾರ್ಡ್‌ಗಳಿರುವ ಕಡತವನ್ನು ಅಪ್‌ಲೋಡ್ ಮಾಡಲು ಸಾಧ್ಯವಿಲ್ಲ, 198 ವಾರ್ಡ್‌ಗಳು ಮಾತ್ರ ಕಾಣಿಸುತ್ತಿವೆ ಎಂದು ತಿಳಿಸಿದ್ದಾರೆ.

ಯುಡಿಡಿ ಫೈಲ್ ಅನ್ನು ಅಪ್‌ಲೋಡ್ ಮಾಡಬೇಕು ಮತ್ತು ಬಿಬಿಎಂಪಿ ಅದಕ್ಕೂ ಯಾವುದೇ ಸಂಬಂಧವಿಲ್ಲ. 243 ವಾರ್ಡ್‌ಗಳ ಪಟ್ಟಿಯನ್ನು ಯುಡಿಡಿ ಇನ್ನೂ ಅಪ್‌ಲೋಡ್ ಮಾಡಿಲ್ಲ, ಅಂತಿಮವಾಗದ ಫೈಲ್ ಸಿಎಂ ಕಚೇರಿಯಲ್ಲಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಲಿಮಿಟೇಶನ್ ಗೆ ಸಂಬಂಧಿಸಿದ ಯಾವುದೇ ಪ್ರತಿಯನ್ನು ಇಲ್ಲಿಯವರೆಗೂ ಅಪಲೋಡ್ ಮಾಡಿಲ್ಲ ಎಂದು ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT