ಸಂಗ್ರಹ ಚಿತ್ರ 
ರಾಜ್ಯ

ಜೂನ್ 20ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಪ್ರತಿಭಟನೆ ನಡೆಸಲು ರೈತರ ಸಜ್ಜು

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗ ಭೇಟಿ ನೀಡುತ್ತಿದ್ದು, ಈ ವೇಳೆ ರೈತರ ಬೆಳೆಗಳಿಗೆ ಬೆಲೆ ಖಾತರಿ ಶಾಸನ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘವು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗ ಭೇಟಿ ನೀಡುತ್ತಿದ್ದು, ಈ ವೇಳೆ ರೈತರ ಬೆಳೆಗಳಿಗೆ ಬೆಲೆ ಖಾತರಿ ಶಾಸನ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘವು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಮಾತನಾಡಿ, ನಗರದ ನ್ಯಾಯಾಲಯ ಎದುರಿನ ಗಾಂಧಿ ಪುತ್ಥಳಿ ಬಳಿ ತರಕಾರಿ, ಹಣ್ಣು, ದವಸ, ಧಾನ್ಯ ಮಾರಾಟ ಮಾಡುವ ಮೂಲಕ ಪ್ರಧಾನಮಂತ್ರಿಗಳ ಗಮನ ಸೆಳೆಯಲಾಗುತ್ತದೆ. ಮೈಸೂರಿಗೆ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಮಯೋಗಿಗಳ ಕಾಯಕ ದಿನವನ್ನು ಆಚರಿಸಲಾಗುವುದು  ಎಂದು ಹೇಳಿದ್ದಾರೆ.

ಈ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು ನರೇಂದ್ರ ಮೋದಿಯವರು ಡಾ.ಸ್ವಾಮಿನಾಥನ್ ವರದಿ ಜಾರಿ ಗೊಳಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಸುಪ್ರೀಂಕೋರ್ಟ್ ನಲ್ಲಿಯೂ ವರದಿ ಜಾರಿ ಅಸಾಧ್ಯ ಎಂದು ಅಫಿಡವಿಟ್ ಸಲ್ಲಿಸಿರುವುದು ನಮಗೆ ಬೇಸವನ್ನು ತರಿಸಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರುವ ವೇಳೆ 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ನೀಡಿದ್ದ ಭರವಸೆ ಕೂಡ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಸಾಲ ನೀಡಲು ಸಿಬಿಲ್ ಸ್ಕೇರ್ ಉತ್ತಮವಾಗಿರಬೇಕೆಂಬ ನಿಯಮ ಬ್ಯಾಂಕ್ ಗಳು ಅನುಸರಿಸುತ್ತಿರುವ ಕಾರಣ ರೈತರಿಗೆ ಸಾಲ ದೊರೆಯುತ್ತಿಲ್ಲ. ಕ್ರಮ ಕೈಗೊಳ್ಳದಿದ್ದಲ್ಲಿ ಬೆಂಗಳೂರಿನ ಆರ್'ಬಿಐ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT