ಹಿಜಾಬ್ ಪರ ವಿದ್ಯಾರ್ಥಿನಿಯರು 
ರಾಜ್ಯ

ಮಂಗಳೂರು: ಹಾಜರಾತಿಯಲ್ಲಿ ಕೊರತೆ, 19 ಹಿಜಾಬ್ ಪರ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರ ನಿರಾಕರಣೆ

ಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ಸಮೀಪದ ಕಾಲೇಜೊಂದರ 19 ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದಂತೆ ನಿರ್ಬಂಧಿಸಲಾಗಿದೆ.

ಮಂಗಳೂರು: ಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ಸಮೀಪದ ಕಾಲೇಜೊಂದರ 19 ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದಂತೆ ನಿರ್ಬಂಧಿಸಲಾಗಿದೆ. ಹೈಕೋರ್ಟ್‌ನ ಆದೇಶದ ಮೇರೆಗೆ ಮಂಗಳೂರು ಹೊರವಲಯದ ಹಳೆಯಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಜಾರಿಗೊಳಿಸಿದ ನಂತರ ಒಂದು ತಿಂಗಳಿನಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿಲ್ಲ.

ಹಾಜರಾತಿ ಕೊರತೆಯಿಂದಾಗಿ ನಮ್ಮ ಮೊದಲ, ಎರಡನೇ ಮತ್ತು ಮೂರನೇ ಸೆಮಿಸ್ಟರ್‌ಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ. ವರ್ಷದ ಮಧ್ಯದಲ್ಲಿ ಹಿಜಾಬ್ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿನಿಯೊಬ್ಬರು ಹೇಳಿದ್ದಾರೆ. ಹಾಜರಾತಿ ಕಡಿಮೆಯಾಗಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಹೇಳಿದ್ದಾರೆ.

ಈ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಹೈಕೋರ್ಟ್ ಆದೇಶದ ಬಗ್ಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಆದರೆ ಅವರು ಹಿಜಾಬ್ ಧರಿಸುವುದರಿಂದ ಹಿಂದೆ ಸರಿದಿಲ್ಲ. ಈ ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯಲು ಪ್ರತ್ಯೇಕ ಕೊಠಡಿಗಳನ್ನು ಕೂಡ ವ್ಯವಸ್ಥೆ ಮಾಡಿದ್ದೇವೆ ಎಂದು ಅವರು ಹೇಳಿದರು. 

ಜೂನ್ 1 ರಿಂದ ತರಗತಿಗಳಿಗೆ ಹಾಜರಾಗುವಂತೆ ಅವರನ್ನು ಒತ್ತಾಯಿಸಿದ್ದೇವೆ ಮತ್ತು ಹಾಜರಾತಿ ಕೊರತೆಯ ಹೊರತಾಗಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದ್ದೇವೆ ಆದರೆ ಅವರು ನಮ್ಮ ಮಾತನ್ನು ಕೇಳಲಿಲ್ಲ. ತರಗತಿಗಳಿಗೆ ಹಾಜರಾಗಿ ಮುಂದಿನ ಪರೀಕ್ಷೆ ಬರೆಯಬೇಕಾದರೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿಶೇಷ ಅನುಮತಿ ಪಡೆಯಬೇಕು ಎಂದು ಹೇಳಿದರು.

ಈ ಮಧ್ಯೆ ಕೆಲವು ವಿದ್ಯಾರ್ಥಿಗಳು ಅಧ್ಯಯನವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಅವರಲ್ಲಿ ಕೆಲವರು ಟೈಲರಿಂಗ್ ತರಗತಿಗಳಿಗೆ ಹಾಜರಾಗಲು ಪ್ರಾರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

IPL 2026: B***s Of Steel" ರವಿಶಾಸ್ತ್ರಿ ಹೇಳಿಕೆ ಕುರಿತು ನೆಟ್ಟಿಗರಿಂದ ತೀವ್ರ ಚರ್ಚೆ!

SCROLL FOR NEXT