ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ರಾಜ್ಯ

ಹಾಸನ: ಪ್ರಸಿದ್ಧ ಹೊಯ್ಸಳ ದೇವಾಲಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಬೇಲೂರು ಮತ್ತು ಹಳೇಬೀಡಿನಲ್ಲಿರುವ ಪ್ರಸಿದ್ಧ ಹೊಯ್ಸಳ ದೇವಾಲಯಗಳಿಗೆ ಭೇಟಿ ನೀಡಿದರು.

ಹಾಸನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಬೇಲೂರು ಮತ್ತು ಹಳೇಬೀಡಿನಲ್ಲಿರುವ ಪ್ರಸಿದ್ಧ ಹೊಯ್ಸಳ ದೇವಾಲಯಗಳಿಗೆ ಭೇಟಿ ನೀಡಿದರು.

ಹಾಸನ ಜಿಲ್ಲೆಗೆ ತಮ್ಮ ಚೊಚ್ಚಲ ಭೇಟಿಯಲ್ಲಿ ರಾಜ್ಯಪಾಲರು ಕ್ರಮವಾಗಿ ಬೇಲೂರು ಮತ್ತು ಹಳೇಬೀಡಿನ ಚನ್ನಕೇಶವ ದೇವಸ್ಥಾನ ಮತ್ತು ಹೊಯ್ಸಳೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ, ದೇವಾಲಯದ ಸುತ್ತಮುತ್ತ ಕೆತ್ತಲಾದ ಅದ್ಭುತ ವಾಸ್ತು ಶಿಲ್ಪಗಳನ್ನು ವೀಕ್ಷಿಸಿದರು.

ಐತಿಹಾಸಿಕ ಬೇಲೂರು ಮತ್ತು ಹಳೇಬೀಡು ವಾಸ್ತು ಶಿಲ್ಪ ಶೈಲಿ ಕುರಿತು ಹಿರಿಯ ಮಾರ್ಗದರ್ಶಕ ಅಸ್ಲಂ ಶರೀಫ್ ಅವರು ರಾಜ್ಯಪಾಲರಿಗೆ ತಿಳಿಸಿದರು. ದೇವಾಲಯದ ಇತಿಹಾಸ, ಆಡಳಿತಗಾರರು ಮತ್ತು ನಿರ್ಮಾಣದ ಉದ್ದೇಶವನ್ನು ವಿವರಿಸಿದ್ದಾರೆ.

ದೇವಾಲಯದ ಸುತ್ತಲೂ ಸ್ಥಾಪಿಸಲಾದ ಕೆತ್ತನೆಗಳು ಮತ್ತು ಶಿಲಾಬಾಲಿಕೆಯರ ವಾಸ್ತು ಶಿಲ್ಪ ಕಂಡು ರಾಜ್ಯಪಾಲರು ವಿಸ್ಮಿತರಾದರು. ಬಳಿಕ ಚನ್ನಕೇಶವ ದೇವರಿಗೆ ಪೂಜೆ ಸಲ್ಲಿಸಿದರು. ರಾಜ್ಯಪಾಲರು ಹಾಗೂ ಕುಟುಂಬದವರ ಹೆಸರಿನಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ ಅರ್ಚನೆ ಮಾಡಿದರು.

ಇದಕ್ಕೂ ಮುನ್ನ ಸ್ಥಳೀಯ ಶಾಸಕ ಕೆ.ಎಸ್.ಲಿಂಗೇಶ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿದುಲ್ಲತಾ ಅವರು ರಾಜ್ಯಪಾಲರನ್ನು ಸ್ವಾಗತಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT