ಕೇಂದ್ರ ಸಚಿವ ಭಗವಂತ ಖೂಬಾ 
ರಾಜ್ಯ

ರೈತನೊಂದಿಗೆ ಕೇಂದ್ರ ಸಚಿವ ಖೂಬಾ ಒರಟು ಮಾತು, ಆಡಿಯೋ ಕ್ಲಿಪ್ ವೈರಲ್!

ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಲಬುರಗಿ: ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದ ರೈತನೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ಸಚಿವರ ಜತೆ ದೂರವಾಣಿಯಲ್ಲಿ ಮಾತನಾಡಿರುವ ಕ್ಲಿಪ್ ಇದಾಗಿದೆ. ನಿನ್ನೆ ರಾತ್ರಿ ಉತ್ತಮ ಮಳೆಯಾಗಿದೆ, ಆದರೆ ಗ್ರಾಮಕ್ಕೆ ರಸಗೊಬ್ಬರ ಸಿಕ್ಕಿಲ್ಲ ಎಂದು ರೈತರು ಸಚಿವರಿಗೆ ಹೇಳುತ್ತಾರೆ.

ಇದಕ್ಕೆ ಸಚಿವರು, ಸ್ಥಳೀಯ ಸಮಸ್ಯೆಗಳಿಗೆ ಶಾಸಕರು, ಅಧಿಕಾರಿಗಳಿದ್ದಾರೆ, ರಾಜ್ಯಕ್ಕೆ ರಸಗೊಬ್ಬರ ನೀಡುವುದು ನನ್ನ ಕರ್ತವ್ಯವಾಗಿದ್ದು, ಅದನ್ನು ಮಾಡಿರುವುದಾಗಿ ಉತ್ತರಿಸಿದ್ದಾರೆ. ಸುಮಾರು ನಾಲ್ಕು ನಿಮಿಷಗಳ ಕಾಲ ಮಾತುಕತೆ ಮುಂದುವರಿದಿದ್ದು, ಸಮಸ್ಯೆ ಬಗೆಹರಿಸುವಂತೆ ರೈತರು ಸಚಿವರನ್ನು ಒತ್ತಾಯಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ರೈತ ಸಚಿವರಿಗೆ ಹೇಳುತ್ತಿರುವುದು ಕೇಳಿಬಂದಿದೆ. ಇಂತಹ ಬೆದರಿಕೆಗಳಿಗೆ ಸಚಿವರು ಸಿದ್ಧ ಎಂಬ ಮಾತುಗಳೂ ಕೇಳಿಬಂದಿವೆ.

ಇದೇ ವೇಳೆ ಗುರುವಾರ ಸ್ಪಷ್ಟನೆ ನೀಡಿರುವ ಖೂಬಾ, ಜೂ.10ರಂದು ತಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದವರು ರೈತರಲ್ಲ, ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಆ ವ್ಯಕ್ತಿ ತನ್ನನ್ನು 3-4 ಬಾರಿ ದೂರವಾಣಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದ್ದರಿಂದ ಏನಾದರೂ ಏನಾದರೂ ಮಹತ್ವದ ಸಮಸ್ಯೆ ಇರಬಹುದೆಂದು ಭಾವಿಸಿ ಕರೆ ಮಾಡಿದ್ದೆ. ಆತ ಗೊಬ್ಬರದ ಬಗ್ಗೆ ಕೇಳುವ ನೆಪದಲ್ಲಿ ವ್ಯಕ್ತಿ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆಯೇ ಹೊರತು ನಾನಲ್ಲ ಎಂದು ಸಚಿವರು ಹೇಳಿದರು.

ಆಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ತನಗೆ ಮತ್ತು ತನ್ನ ಪಕ್ಷಕ್ಕೆ ಮಾನಹಾನಿ ಮಾಡಲು ಆಯ್ದ ಭಾಗವನ್ನು ವೈರಲ್ ಮಾಡಲಾಗಿದೆ ಎಂದು ಖೂಬಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT