ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ನೀಡಲು ಹೋದ ತಾಯಿಯ ಬಂಧನ

ಜೈಲಿನಲ್ಲಿರುವ ಮಗನಿಗೆ ಮಾದಕ ವಸ್ತು ನೀಡಲು ಹೋದ ತಾಯಿಯು ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಜೈಲಿನಲ್ಲಿರುವ ಮಗನಿಗೆ ಮಾದಕ ವಸ್ತು ನೀಡಲು ಹೋದ ತಾಯಿಯು ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜೈಲಿನಲ್ಲಿದ್ದ ಮಗನನ್ನು ಭೇಟಿಯಾಗಿ ಬಟ್ಟೆ ಕೊಡುವ ನೆಪದಲ್ಲಿ ಮಾದಕ ವಸ್ತುವಾದ ಹ್ಯಾಶಿಷ್ ಆಯಿಲ್ ನೀಡಲು ಯತ್ನಿಸಿದ್ದ ತಾಯಿಯನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಪರ್ವೀನ್ ತಾಜ್ ಬಂಧಿತ ಮಹಿಳೆಯಾಗಿದ್ದಾಳೆ.

ಈಕೆಯ ಮಗ ಮೊಹಮ್ಮದ್ ಬಿಲಾಲ್ ಎಂಬಾತ ರಾಬರಿ ಸೇರಿದಂತೆ 11 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಹೀಗಾಗಿ ಕೋಣನಕುಂಟೆ ಪೊಲೀಸರು ಬಿಲಾನ್ ನನ್ನ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದರು. ತಾಯಿ-ಮಗ ಶಿಕಾರಿಪಾಳ್ಯದಲ್ಲಿ ವಾಸವಾಗಿದ್ದರು‌. ಮಗನನ್ನ ನೋಡಲು ಆಗಾಗ ಪರ್ವೀನ್ ಜೈಲಿಗೆ ಬರುತ್ತಿದ್ದಳು. ಆದರೆ ಕಳೆದ ಜೂನ್ 13ರಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದ ಈಕೆ ಮಗನಿಗೆ ಬಟ್ಟೆ ಕೊಡುವ ನೆಪದಲ್ಲಿ ಊಟದ ಬಾಕ್ಸ್ ನಲ್ಲಿ 5 ಲಕ್ಷ ಮೌಲ್ಯದ ಹ್ಯಾಶಿಷ್ ಆಯಿಲ್ ತಂದಿದ್ದಳು.

ತಾಯಿ-ಮಗ ಶಿಕಾರಿಪಾಳ್ಯದಲ್ಲಿ ವಾಸವಾಗಿದ್ದರು‌. ಮಗನನ್ನು ನೋಡಲು ಆಗಾಗ ಪರ್ವೀನ್ ಜೈಲಿಗೆ ಬರುತ್ತಿದ್ದಳು. ಆದರೆ ಕಳೆದ ಜೂನ್ 13ರಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದ ಈಕೆ ಮಗನಿಗೆ ಬಟ್ಟೆ ಕೊಡುವ ನೆಪದಲ್ಲಿ ಊಟದ ಬಾಕ್ಸ್‌ನಲ್ಲಿ 5 ಲಕ್ಷ ಮೌಲ್ಯದ ಹ್ಯಾಶಿಷ್ ಆಯಿಲ್ ತಂದಿದ್ದಳು.

ಜೈಲು ಸಿಬ್ಬಂದಿ ಈಕೆಯನ್ನು ಪರಿಶೀಲಿಸಿದ ವೇಳೆ ಬಟ್ಟೆಯ ಜೊತೆಯಲ್ಲಿ ಮಾದಕ ವಸ್ತು ಪತ್ತೆಯಾಗಿತ್ತು. ತಕ್ಷಣ ಜೈಲು ಸಿಬ್ಬಂದಿ ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿ ತಾಯಿ ಪರ್ವೀನ್ ತಾಜ್ ಹಾಗೂ ಮಗ ಬಿಲಾಲ್ ಮೇಲೆ ಕೇಸ್ ದಾಖಲಿಸಿರುವ ಪರಪ್ಪನ ಅಗ್ರಹಾರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ನನಗೆ ಯಾರೋ ಪೋನ್ ಮಾಡಿ ಜೈಲಿನಲ್ಲಿರುವ ವ್ಯಕ್ತಿಗೆ ಮಗನ ಮುಖಾಂತರ ಬಟ್ಟೆ‌ಯ ಬ್ಯಾಗ್ ನೀಡಬೇಕೆಂದು ಎಂದು ಪೋನ್‌ ಮಾಡಿದ್ದರು.‌ ಇದರಂತೆ ನಾನು ಬ್ಯಾಗ್ ನೀಡಲು ಒಪ್ಪಿಕೊಂಡೆ. ಬ್ಯಾಗ್‌ನಲ್ಲಿ ಡ್ರಗ್ಸ್ ಇರುವುದು ಗೊತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಾಳೆ.‌‌ ಈಕೆ‌ ಹೇಳಿಕೆ ಮೇರೆಗೆ ಫೋನ್‌ ಬಂದಿದ್ದ ಮೊಬೈಲ್‌‌ ನಂಬರ್ ಆಧರಿಸಿ ಪೊಲೀಸರು ತನಿಖೆ‌‌ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT