ಸಿಮ್ರಾನ್‌ ಶೇಷರಾವ್‌ 
ರಾಜ್ಯ

ದ್ವಿತೀಯ ಪಿಯು ಫಲಿತಾಂಶ: ಬೆಂಗಳೂರಿನ ಟಾಪರ್ ವಿದ್ಯಾರ್ಥಿಗಳು

ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗಗಳಲ್ಲಿ ಅಸಾಧಾರಣ ಅಂಕಗಳೊಂದಿಗೆ ಬೆಂಗಳೂರಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಟಾಪರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಂಗಳೂರು: ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗಗಳಲ್ಲಿ ಅಸಾಧಾರಣ ಅಂಕಗಳೊಂದಿಗೆ ಬೆಂಗಳೂರಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಟಾಪರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಜೈನ್ ಪಿಯು ಕಾಲೇಜಿನ ಮಾನವ್ ವಿನಯ್ ಕೇಜ್ರಿವಾಲ್, ನೀಲು ಸಿಂಗ್ (ಬಿಜಿಎಸ್ ಪಿಯು ಕಾಲೇಜು), ಆಕಾಶ್ ದಾಸ್ (ಸೇಂಟ್ ಕ್ಲಾರೆಟ್ ಕಾಂಪೋಸಿಟ್ ಪಿಯು ಕಾಲೇಜು) ಮತ್ತು ನೇಹಾ ಬಿಆರ್ (ಚಿಕ್ಕಬಳ್ಳಾಪುರದ ಎಸ್‌ಬಿಜಿಎನ್‌ಎಸ್ ಗ್ರಾಮೀಣ ಸಂಯುಕ್ತ ಪಿಯು ಕಾಲೇಜು) 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಬೆಂಗಳೂರಿನ ಆರ್‌ವಿ ಪಿಯು ಕಾಲೇಜಿನ ಸಿಮ್ರಾನ್‌ ಶೇಷರಾವ್‌ 598 ಅಂಕಗಳೊಂದಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದರೆ,  ಬಳ್ಳಾರಿ ಜಿಲ್ಲೆಯ ಇಂಡು ಇಂಡಿಪೆಂಡೆಂಟ್‌ ಪಿಯು ಕಾಲೇಜಿನ ಶ್ವೇತಾ ಭೀಮಾಶಂಕರ ಭೈರಗೊಂಡ ಮತ್ತು ಮಡಿವಾಳರ ಸಹನಾ ಕಲಾ ವಿಭಾಗದಲ್ಲಿ 594 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

 ಶಿಕ್ಷಕರು ಒದಗಿಸಿದ ಅಧ್ಯಯನದ ಮೆಟಿರಿಯಲ್ ಜೊತೆಗೆ ಅವರ ಸ್ವಂತ ನೋಟ್ ಸಿದ್ಧಪಡಿಸಿಕೊಂಡು ಅಧ್ಯಯನ ನಡೆಸಿದ್ದರಿಂದ  ಅಸಾಮಾನ್ಯ ಅಂಕಗಳನ್ನು ಪಡೆಯಲು ನೆರವಾಗಿದೆ ಎಂದು ಕೇಜ್ರಿವಾಲ್ ಹೇಳಿದರು. 

ಬೆಂಗಳೂರಿನ ಜೆಪಿ ನಗರ ಎರಡನೇ ಹಂತದ ನಿವಾಸಿಯಾಗಿರುವ ಅವರು ತಮ್ಮ ಪ್ರಾಂಶುಪಾಲರಾದ ಡಾ.ನಳಿನಿ ಸತೀಶ್ ಚಂದ್ರ, ಪೋಷಕರಾದ ಮಾಧುರಿ ಕೇಜ್ರಿವಾಲ್, ಗೃಹಿಣಿ ಮತ್ತು ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ವಿನಯ್ ಕೇಜ್ರಿವಾಲ್  ಅವರಿಗೆ ಕೃತಜ್ಞತೆ ಸಲ್ಲಿಸಿದರು.  

ಕೇಜ್ರಿವಾಲ್  ಬಿಕಾಂ ಅಧ್ಯಯನಕ್ಕೆ ಸೇರಲು ಬಯಸಿದ್ದು,  ಏಕಕಾಲದಲ್ಲಿ CA, CMA  ಮುಂದುವರಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಹಣಕಾಸು ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಗುರಿಯಾಗಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT