ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 530 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,61,361ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ. ಇದರೊಂದಿಗೆ ಸಾವಿನ ಸಂಖ್ಯೆ 40,071 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ದೇಶದಲ್ಲಿ ಕೊರೋನಾ ಹೆಚ್ಚಳ: ಇಂದು 12,781 ಹೊಸ ಪ್ರಕರಣ ಪತ್ತೆ, 18 ಸಾವು, ಪಾಸಿಟಿವಿಟಿ ದರ ಶೇ. 4ಕ್ಕೆ ಏರಿಕೆ
ಬೆಂಗಳೂರಿನಲ್ಲಿ ಇಂದು 494 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,96,536ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 637 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,16,320ಕ್ಕೆ ಏರಿಕೆಯಾಗಿದೆ. ಇನ್ನು 5,928 ಸಕ್ರಿಯ ಪ್ರಕರಣಗಳಿವೆ.