ಸಾಂದರ್ಭಿಕ ಚಿತ್ರ 
ರಾಜ್ಯ

ಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರು

ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು...

ಮಂಗಳೂರು: ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು.

ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ ಎಸ್ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳು ಆಯಾ ಸಂಸ್ಥೆಗಳು ನಿಗದಿಪಡಿಸಿದ ಡ್ರೆಸ್ ಕೋಡ್‌ಗೆ ಬದ್ಧರಾಗಿರಬೇಕು ಮತ್ತು ಹೈಕೋರ್ಟ್ ನಿರ್ದೇಶನವನ್ನು ಅನುಸರಿಸಬೇಕು. ಬೇರೆ ಕಾಲೇಜ್ ಗುಳಿಗೆ ಸೇರಬಯಸುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಿವಿ ವಿಶೇಷ ವ್ಯವಸ್ಥೆ ಮಾಡಲಿದೆ ಎಂದು ಹೇಳಿದ್ದರು.

ಐವರು ವಿದ್ಯಾರ್ಥಿಗಳು ಟಿಸಿಗಾಗಿ ಮನವಿಯೊಂದಿಗೆ ತಮ್ಮ ಬಳಿಗೆ ಬಂದಿದ್ದರು ಮತ್ತು ತಾವು ಹಿಜಾಬ್ ಅನುಮತಿಸುವ ಇತರ ಕಾಲೇಜುಗಳಿಗೆ ಸೇರಿಕೊಳ್ಳಲು ಟಿಸಿ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಾಲೇಜು ಪ್ರಿನ್ಸಿಪಾಲ್ ಅನಸೂಯಾ ರೈ ಅವರು ತಿಳಿಸಿದ್ದಾರೆ.

ಆದರೆ ಅವರು ನೀಡಿದ ಪತ್ರಗಳು ಅಪೂರ್ಣವಾಗಿ ಕಂಡುಬಂದಿದ್ದರಿಂದ, ಹೊಸ ಪತ್ರ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಅವರು ಇನ್ನೂ ಹೊಸ ಪತ್ರಗಳೊಂದಿಗೆ ಬಂದಿಲ್ಲ ಎಂದು ರೈ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT