ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅಕ್ರಮ ಬ್ಯಾನರ್‌ಗಳ ತೆರವುಗೊಳಿಸಿದ ಬಿಬಿಎಂಪಿ

ನಗರದ ಹಲವು ರಸ್ತೆಗಳಲ್ಲಿ ರಾರಾಜಿಸುತ್ತಿದ್ದ ಅಕ್ರಮ ಬ್ಯಾನಕ್ ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ.

ಬೆಂಗಳೂರು: ನಗರದ ಹಲವು ರಸ್ತೆಗಳಲ್ಲಿ ರಾರಾಜಿಸುತ್ತಿದ್ದ ಅಕ್ರಮ ಬ್ಯಾನಕ್ ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ.

ಅಕ್ರಮ ಬ್ಯಾನರ್ ಗಳ ಪತ್ತೆಯೆ ಜಿಪಿಎಸ್ ಕ್ಯಾಮೆರಾಗಳನ್ನು ಬಳಕೆ ಮಾಡಲಾಗಿದ್ದು, ಜಂಟಿ ಆಯುಕ್ತರ ನೇತೃತ್ವದಲ್ಲಿ ಎಂಟು ವಲಯಗಳಲ್ಲಿ 200 ಸಿಬ್ಬಂದಿಗಳ ತಂಡ ವಿಶೇಷ ಅಭಿಯಾನ ನಡೆಸಿ 5 ಸಾವಿರಕ್ಕೂ ಹೆಚ್ಚು ಬ್ಯಾನರ್ ಗಳನ್ನು ತೆರವುಗೊಳಿಸಿದೆ.

ಬಿಬಿಎಂಪಿ (ಕಂದಾಯ) ವಿಶೇಷ ಆಯುಕ್ತ ದೀಪಕ್ ಆರ್‌ಎಲ್ ಅವರು ಮಾತನಾಡಿ, “ಅಂತರರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಅಕ್ರಮ ಬ್ಯಾನರ್‌ಗಳ ಕುರಿತು ನಮಗೆ ಸಾಕಷ್ಟು ದೂರುಗಳು ಬಂದಿದ್ದವು. ಸಿಎಂ ಬೊಮ್ಮಾಯಿ ನಿವಾಸದ ಎದುರಿನ ಕನಕದಾಸ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕೆಲ ಸಂಘಟಕರು ಬ್ಯಾನರ್'ಗಳನ್ನು ಹಾಕಿದ್ದರು. ಹೀಗಾಗಿ ಎಲ್ಲಾವಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಿ ಜಿಪಿಎಸ್ ಕ್ಯಾಮೆರಾಗಳನ್ನು ಬಳಸಿ ಅಕ್ರಮ ಬ್ಯಾನರ್ ಗಳನ್ನು ತೆರವುಗೊಳಿಸಿದೆವು. ನಾಲ್ಕು ಗಂಟೆಗಳಲ್ಲಿ ಈ ಕಾರ್ಯಾಚರಣೆಯನ್ನು ಮಾಡಲಾಯಿತು ಎಂದು ಹೇಳಿದರು.

ಹೈಕೋರ್ಟ್ ಆದೇಶದ ಹೊರತಾಗಿಯು ನಗರದಲ್ಲಿ ಅಕ್ರಮ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ನಾಯಿಕೊಡೆಗಳಂತೆ ಹೆಚ್ಚಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷವಾಗಿ ರಾಜಕೀಯ ಮುಖಂಡರನ್ನು ಸ್ವಾಗತಿಸುವ ಬ್ಯಾನರ್‌ಗಳನ್ನು ಹಾಕುವವರ ವಿರುದ್ಧ ಪಾಲಿಕೆ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ಯೋಗ ಸಂಘಟಕ ರಾಘವೇಂದ್ರಗೌಡ ಮಾತನಾಡಿ, ಹೆಬ್ಬಾಳ ಕ್ಷೇತ್ರದಲ್ಲಿ ಬ್ಯಾನರ್ ಹಾಕಲು ಬಿಬಿಎಂಪಿಗೆ ರೂ.3,500 ಹಣ ನೀಡಲಾಗಿತ್ತು. ಹಾಗಿದ್ದರೂ ಬಿಬಿಎಂಪಿ ಅಧಿಕಾರಿಗಳು ಬ್ಯಾನರ್ ತೆಗೆದಿದ್ದು ಆಘಾತವನ್ನುಂಟು ಮಾಡಿದೆ. ಇನ್ನು ಬಳ್ಳಾರಿ ರಸ್ತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸುವ ಸಾವಿರಾರು ಬ್ಯಾನರ್‌ಗಳನ್ನು ನೋಡಿದ್ದೇನೆ. ಅವರ ವಿರುದ್ಧವೇಕೆ ಬಿಬಿಎಂಪಿ ಕ್ರಮ ಕೈಗೊಳ್ಳಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT