ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಸಿಬಿಐ ದಾಳಿಯಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ರೈಲ್ವೇ ಇಲಾಖೆ ಸಿಬ್ಬಂದಿ ಶವ ಪತ್ತೆ

ಸಿಬಿಐ ದಾಳಿಯಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ರೈಲ್ವೇ ಇಲಾಖೆ ಸಿಬ್ಬಂದಿಯ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಂಗಳೂರು ಹೊರವಲಯದ ತೊಕ್ಕೊಟ್ಟು ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.

ಮಂಗಳೂರು: ಸಿಬಿಐ ದಾಳಿಯಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ರೈಲ್ವೇ ಇಲಾಖೆ ಸಿಬ್ಬಂದಿಯ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಂಗಳೂರು ಹೊರವಲಯದ ತೊಕ್ಕೊಟ್ಟು ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.

ಮಂಗಳೂರು ರೈಲ್ವೇ ನಿಲ್ದಾಣ ಬಳಿಯ ರೈಲ್ವೇ ಆಸ್ಪತ್ರೆ ಫಾರ್ಮಸಿಸ್ಟ್ ವಿಜಯನ್ ಶವ ಪತ್ತೆಯಾಗಿದ್ದು, ರೈಲ್ವೇ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದೆ. ಆದರೆ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಮಂಗಳೂರಿನ ರೈಲ್ವೇ ಆಸ್ಪತ್ರೆಗೆ ಬೆಂಗಳೂರಿನ ಸಿಬಿಐ ಟೀಂ ದಾಳಿ ನಡೆಸಿತ್ತು. ರೈಲ್ವೇ ನೌಕರರಿಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿದ್ದ ಆರೋಪದಡಿ ದಾಳಿ ನಡೆಸಲಾಗಿದ್ದು, ದಾಳಿ ನಡೆಸಿ ಆಸ್ಪತ್ರೆ ಫಾರ್ಮಸಿಸ್ಟ್ ವಿಜಯನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಿತ್ತು ಮಾಡಲಾಗಿತ್ತು. ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ವಿಜಯನ್ ಶವ ಇಂದು ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ರೈಲ್ವೇ ಪೊಲೀಸ್ ಮತ್ತು ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ರೈಲ್ವೇ ನೌಕರರು ಪ್ರತೀ ವರ್ಷ ದೈಹಿಕ ಕ್ಷಮತೆ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು.‌ ಆದರೆ ವಿಜಯನ್ ಮತ್ತು ತಂಡ ಈ ಪ್ರಮಾಣ ಪತ್ರವನ್ನ ಹಣ ಪಡೆದು ತಯಾರಿಸಿಕೊಡುತ್ತಿದ್ದ ಆರೋಪ ಮಾಡಲಾಗಿದೆ.

ನಕಲಿ ವೈದ್ಯಕೀಯ ಪ್ರಮಾಣ ಪತ್ರ ಸಂಬಂಧ ಕೇಂದ್ರ ರೈಲ್ವೇ ವಿಭಾಗದಿಂದ ಸಿಬಿಐ ತಂಡಕ್ಕೆ ಮಾಹಿತಿ ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಾಗ ದೇಶದ ಹಲವು ರೈಲ್ವೇ ಆಸ್ಪತ್ರೆಗಳಲ್ಲಿ ನಕಲಿ ಸರ್ಟಿಫಿಕೇಟ್ ನೀಡಿರುವುದು ಬೆಳಕಿಗೆ ಬಂದಿದೆ. ಅದರಂತೆ ಮಂಗಳೂರು ಕೇಂದ್ರದಲ್ಲೂ ನಕಲಿ ಸರ್ಟಿಫಿಕೇಟ್ ನೀಡಿರೋದು ಪತ್ತೆಯಾಗಿತ್ತು, ಅದರಂತೆ ಸಿಬಿಐ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿತ್ತು.

ರೈಲುಗಳಲ್ಲಿ ಕೆಲಸ ಮಾಡುವ ಫ್ಲಾಟ್ ಫಾರಂ ಸಿಬ್ಬಂದಿ, ರೈಲು ಚಾಲಕ, ಅಡುಗೆಯವರು, ಕ್ಲೀನಿಂಗ್ ಸಿಬ್ಬಂದಿ ಸೇರಿ ಎಲ್ಲರಿಗೂ ಈ ಸರ್ಟಿಫಿಕೇಟ್ ಸಲ್ಲಿಕೆ ಕಡ್ಡಾಯವಾಗಿದೆ. ಆದರೆ ಇವರೆಲ್ಲರಿಗೂ ಪರೀಕ್ಷೆ ನಡೆಸದೆ ಪ್ರಮಾಣ ಪತ್ರ ನೀಡಲಾಗಿತ್ತು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT