ಮೈಸೂರು ರಾಜವಂಶಸ್ಥರ ಜೊತೆ ಪ್ರಧಾನಿ ಮೋದಿ 
ರಾಜ್ಯ

ಮೈಸೂರು: ಬೆಳಗಿನ ಉಪಹಾರವಾಗಿ ಮೈಸೂರು ಪಾಕ್, ಮಸಾಲೆ ದೋಸೆ ಸವಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದು ಮೈಸೂರಿನ ಅರಮನೆಯಲ್ಲಿ ರಾಜಮನೆತನದವರೊಂದಿಗೆ ಪ್ರಸಿದ್ಧವಾದ ಮೈಸೂರು ಪಾಕ್ ಮತ್ತು ಮೈಸೂರು ಮಸಾಲೆ ದೋಸೆಯ ರುಚಿಯನ್ನು ಸವಿದಿದ್ದಾರೆ.

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದು ಮೈಸೂರಿನ ಅರಮನೆಯಲ್ಲಿ ರಾಜಮನೆತನದವರೊಂದಿಗೆ ಪ್ರಸಿದ್ಧವಾದ ಮೈಸೂರು ಪಾಕ್ ಮತ್ತು ಮೈಸೂರು ಮಸಾಲೆ ದೋಸೆಯ ರುಚಿಯನ್ನು ಸವಿದಿದ್ದಾರೆ.

ಅಂಬಾ ವಿಲಾಸ ಪ್ಯಾಲೇಸ್ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದ ನಂತರ ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಆಯೋಜಿಸಲಾಗಿದ್ದ  'ವಿನೂತನ ಡಿಜಿಟಲ್ ಯೋಗ ಪ್ರದರ್ಶನ' ಉದ್ಘಾಟಿಸಿದ ಪ್ರಧಾನಿ, ರಾಜಮನೆತನದವರ ಆಹ್ವಾನದ ಮೇರೆಗೆ ಅರಮನೆಗೆ ತೆರಳಿ ಬೆಳಗಿನ ಉಪಹಾರ ಸ್ವೀಕರಿಸಿದರು.

ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ರಾಜಮಾತೆ" ಪ್ರಮೋದಾ ದೇವಿ ಒಡೆಯರ್ ಕೂಡಾ ಯೋಗ ದಿನಾಚರಣೆಯಲ್ಲಿ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಬೆಳಗಿನ ಉಪಾಹಾರಕ್ಕೆ ಆಹ್ವಾನಿಸಿ ಪ್ರಧಾನಿಗೆ ಪತ್ರ ಬರೆದಿದ್ದಾಗಿ ಪ್ರಮೋದಾ ದೇವಿ ಒಡೆಯರ್ ತಿಳಿಸಿದರು. 

ಮೈಸೂರಿಗೆ ಯೋಗ ದಿನಾಚರಣೆಗೆ ಬಂದಾಗ ಬೆಳಗ್ಗೆನ ಉಪಹಾರಕ್ಕಾಗಿ ತಮ್ಮ ಮನೆಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ನಮ್ಮ ಮನೆಯಲ್ಲಿ ಪ್ರಧಾನಿ ಉಪಹಾರ ಸ್ವೀಕರಿಸಿದರಿಂದ ತುಂಬಾ ಸಂತೋಷವಾಗಿದೆ ಎಂದರು.

ಮೈಸೂರಿನವರಾಗಿ ಸಾಮಾನ್ಯವಾಗಿ ದಕ್ಷಿಣ ಪ್ರದೇಶದ ಆಹಾರ ಪದಾರ್ಥಗಳು ಪ್ರಧಾನಿಯವರ ಬೆಳಗಿನ ಉಪಹಾರದ ಮೆನುವಿನಲ್ಲಿತ್ತು. ಮೈಸೂರು ಮೂಲವನ್ನು ಹೊಂದಿರುವ ಮೈಸೂರು ಪಾಕ್, ಮೈಸೂರು ಮಸಾಲೆ ದೋಸೆ ಕೂಡ ಪ್ರಧಾನಿ ಅವರ ಮೆನುವಿನಲ್ಲಿತ್ತು ಎಂದು ರಾಜಮಾತೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT