ರಕ್ಷಣೆಗೊಳಗಾಗಿರುವ 15 ಮಂದಿ. 
ರಾಜ್ಯ

ಮಂಗಳೂರಿನಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆ: 15 ಮಂದಿ ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್!

ಭಾರತೀಯ ಕರಾವಳಿ ಕಾವಲು ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ಸಂಜೆ ನವಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆಯಿಂದ ಸಿರಿಯಾಗೆ ಸೇರಿದ 15 ಮಂದಿಯನ್ನು ರಕ್ಷಣೆ ಮಾಡಿದೆ.

ಮಂಗಳೂರು: ಭಾರತೀಯ ಕರಾವಳಿ ಕಾವಲು ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ಸಂಜೆ ನವಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸರಕು ನೌಕೆಯಿಂದ ಸಿರಿಯಾಗೆ ಸೇರಿದ 15 ಮಂದಿಯನ್ನು ರಕ್ಷಣೆ ಮಾಡಿದೆ.

ಕೋಸ್ಟ್ ಗಾರ್ಡ್ ಡಿಐಜಿ ಎಸ್ ಬಿ ವೆಂಕಟೇಶ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಮಂಗಳವಾರ ಮಧ್ಯಾಹ್ನ 2.30ಕ್ಕೆ ಕೋಸ್ಟ್ ಗಾರ್ಡ್ ಗೆ ಪ್ರಿನ್ಸಸ್ ಮಿರಾಲ್ ಹೆಸರಿನ ಸರಕು ನೌಕೆ ಅಪಾಯಕ್ಕೆ ಸಿಲುಕಿರುವ ಕುರಿತು ಮಾಹಿತಿ ಬಂದಿತ್ತು. ಕೂಡಲೇ ಎರಡು ಕೋಸ್ಟ್ ಗಾರ್ಡ್ ಹಡಗುಗಳಾದ ಐಸಿಜಿಎಸ್ ವಿಕ್ರಮ್ ಮತ್ತು ಐಸಿಜಿಎಸ್ ಅಮರ್ತ್ಯವನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು. ಹಡಗುಗಳು ಸಂಜೆ 5.30 ರ ಹೊತ್ತಿಗೆ ಸ್ಥಳಕ್ಕೆ ತಲುಪಿದ್ದವು, ಈ ವೇಳೆ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ನೌಕೆಯಲ್ಲಿದ್ದ 15 ಮಂದಿಯನ್ನು ರಕ್ಷಣೆ ಮಾಡಿದೆ ಎಂದು ಹೇಳಿದರು.

 ಈ ನೌಕೆ 8 ಸಾವಿರ ಟನ್ ಸ್ಟೀಲ್ ಕೋಲ್ ಅನ್ನು ಹೊತ್ತು ಮಲೇಷ್ಯಾದಿಂದ ಲೆಬನಾನ್‌ಗೆ ತೆರಳುತ್ತಿತ್ತು. ಈಮಧ್ಯೆ ಇಂಜಿನ್'ನ ಒಳಭಾಗದಲ್ಲಿ ಸಣ್ಣ ರಂಧ್ರ ಮೂಲಕ ನೀರು ಒಳಬರಲು ಪ್ರಾರಂಭಿಸಿದೆ. ಇದನ್ನು ತುರ್ತು ದುರಸ್ತಿಪಡಿಸುವ ಸಲುವಾಗಿ ಲಂಗರಿಗೆ ಅವಕಾಶ ಕಲ್ಪಿಸುವಂತೆ ನೌಕೆಯ ಕ್ಯಾಪ್ಟನ್ ಬಂದರು ಅಧಿಕಾರಿಗಳನ್ನು ಸಂಪರ್ಕಿಸಿದ್ದ.

ಇದೇ ವೇಳೆ ಅಪಾಯದಲ್ಲಿದ್ದ ನೌಕೆಯಿಂದ ಕ್ಯಾಪ್ಟನ್ ಹಾಗೂ ಸಿಬ್ಬಂದಿ ಸೇರಿ 15 ಮಂದಿಯನ್ನು ಕೋಸ್ಟ್ ಗಾರ್ಡ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ರಕ್ಷಿಸಿದ 15 ಮಂದಿಯನ್ನು ನವ ಮಂಗಳೂರಿಗೆ ಕರೆದೊಯ್ಯಲಾಗಿದ್ದು, ಮುಂದಿನ ಕ್ರಮಕ್ಕಾಗಿ ಪೊಲೀಸ್ ಮತ್ತು ವಲಸೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT