ಕರ್ನಾಟಕ ಹೈಕೋರ್ಟ್ 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಕರ್ನಾಟಕ ಹೈಕೋರ್ಟ್

ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. 

ಕಟ್ಟಡದ ನೆಲಮಹಡಿ ಸಾರ್ವಜನಿಕ ವೀಕ್ಷಣೆಯ ಸ್ಥಳವಲ್ಲ. ಹಾಗಾಗಿ ಅಲ್ಲಿಂದ ಬಯ್ಯುವುದು ಅಥವಾ ನಿಂದನೆ ಮಾಡಿದರೆ ಅದು ಪರಿಶಿಷ್ಠ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 

ಮಂಗಳೂರಿನ ರಿತೇಶ್ ಪಯಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. 2020ರಲ್ಲಿ ಈ ಪ್ರಕರಣ ನಡೆದಿತ್ತು. ನೆಲಮಹಡಿ ಸಾರ್ವಜನಿಕ ವೀಕ್ಷಣೆಯ ಸ್ಥಳವಲ್ಲ. ಹೀಗಾಗಿ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಸೆ. 3(1)(ಆರ್)(ಎಸ್)(ವಿಎ) ಅನ್ವಯವಾಗುವುದಿಲ್ಲ ಎಂದು ಹೇಳಿರುವ ಕೋರ್ಟ್ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿ ರಿತೇಶ್ ಪಯಾಸ್ ವಿರುದ್ಧ ಹೂಡಿದ್ದ ಅಟ್ರಾಸಿಟಿ ಕಾಯ್ದೆಯನ್ನು ರದ್ದುಪಡಿಸಿದೆ. 

ರಿತೇಶ್ ಪಯಾಸ್ ಮತ್ತು ಜಯಕುಮಾರ್ ನಾಯರ್ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯವಿತ್ತು. ನಾಯರ್ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಎಂಬಾತ ತಮ್ಮನ್ನು ಜಾತಿನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!