ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 
ರಾಜ್ಯ

ಮೊಬೈಲ್ ಟಾಯ್ಲೆಟ್ ನಿರ್ಮಿಸಿದ ಪಿಎಸ್ಐಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಭಿನಂದನೆ

ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಇದೇ ತಿಂಗಳ 15 ರಂದು 10 ಮೊಬೈಲ್ ಟಾಯ್ಲೆಟ್ ನಿರ್ಮಿಸಿರುವ ಸೆಂಟ್ರಲ್ ವಿಭಾಗದ ಪಿಎಸ್ ಐ ಶಾಂತಪ್ಪ ಜಡೇಮ್ಮನವರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಮಾಡಿದ್ದು, ಅವರ ಸಾರ್ವಜನಿಕ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಇದೇ ತಿಂಗಳ 15 ರಂದು 10 ಮೊಬೈಲ್ ಟಾಯ್ಲೆಟ್ ನಿರ್ಮಿಸಿರುವ ಸೆಂಟ್ರಲ್ ವಿಭಾಗದ ಪಿಎಸ್ ಐ ಶಾಂತಪ್ಪ ಜಡೇಮ್ಮನವರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಮಾಡಿದ್ದು, ಅವರ ಸಾರ್ವಜನಿಕ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ, ಬಿಬಿಎಂಪಿಯಿಂದ ಹೇಗೆ ಟಾಯ್ಲೆಟ್ ನಿರ್ವಹಣೆ ಮಾಡಬಹುದು ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಗಿರಿನಾಥ್ ನಿರ್ದೇಶಿಸಿದ್ದಾರೆ.

ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿಯ ತಾಜ್ ವಿವಾಂತ ಬಳಿಯ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಬಸ್ಸಿಗಾಗಿ ಕಾಯುವವರಿಗಾಗಿ ಸಾರ್ವಜನಿಕ ಟಾಯ್ಲೆಟ್ ನಿರ್ಮಿಸಲು ಪಿಎಸ್ ಐ ಆನ್ ಲೈನ್ ಅಭಿಯಾನ ಆರಂಭಿಸಿದ್ದರು. 100 ದಿನ ಕಳೆದರೂ ಜನಪ್ರತಿನಿಧಿಗಳು ಅಥವಾ ಸಂಬಂಧಿಸಿದ ಅಧಿಕಾರಿಗಳಿಂದ ಸ್ಪಂದನೆ ದೊರೆಯದಿದ್ದಾಗ ತಾವೇ ಸ್ವತ: ಟಾಯ್ಲೆಟ್ ಆರಂಭಿಸಿದ್ದಾರೆ.

 ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಪಿಎಸ್‌ಐ ಅವರನ್ನು ತಮ್ಮ ಕಚೇರಿಗೆ ಕರೆಸಿ ಉತ್ತಮ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದ್ದಾರೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಜಡೆಮ್ಮನವರ್, “ಬಿಬಿಎಂಪಿ ಆಯುಕ್ತರ ಕಚೇರಿಯಿಂದ ಕರೆ ಬಂದಾಗ, ಬಿಬಿಎಂಪಿಯವರ ಕೆಲಸ ಮಾಡಿದ್ದಕ್ಕೆ ನನನ್ನು ತರಾಟೆಗೆ ತೆಗೆದುಕೊಳ್ಳಬಹುದು ಎಂದು ಹೆದರುತ್ತಿದೆ. ಆದರೆ ಆಯುಕ್ತರು ನನ್ನ ಪ್ರಯತ್ನವನ್ನು ಶ್ಲಾಘಿಸಿದರು ಮತ್ತು ಸಾರ್ವಜನಿಕ ಶೌಚಾಲಯಗಳ ಕುರಿತು ಹೆಚ್ಚಿನ ವಿವರಗಳನ್ನು ಕೇಳಿದರು ಎಂದು ತಿಳಿಸಿದರು.

ಪೌರಕಾರ್ಮಿಕರ ಸಹಾಯವಿಲ್ಲದೆ ಸಾರ್ವಜನಿಕ ಶೌಚಾಲಯಗಳು ಕಾರ್ಯ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ವಿವರಿಸಿದರು. “ಜಂಕ್ಷನ್‌ನಲ್ಲಿ ಮತ್ತೊಂದು ಸಾರ್ವಜನಿಕ ಶೌಚಾಲಯವಿದ್ದು, ಅದು ಬಳಕೆಯಾಗದೆ ಕೆಲವು ಸಮಯದಿಂದ ಬೀಗ ಹಾಕಲಾಗಿದೆ. ಅದು ಕಾರ್ಯರೂಪಕ್ಕೆ ಬಂದರೆ, ಹೆಚ್ಚಿನ ಶೌಚಾಲಯಗಳು ಇರುತ್ತವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT